ಮಂಗಳೂರು: ಹಿರಿಯ ಪತ್ರಕರ್ತೆ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ರ ಬರ್ಬರ ಹತ್ಯೆಯನ್ನು ಖಂಡಿಸಿ ಇಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನೆ ನಡೆಯಿತು.
ದ.ಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಗೌರಿ ಲಂಕೇಶ್ರ ಹತ್ಯೆ ಖಂಡಿಸಿ ಹಾಗೂ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಲಾಯಿತು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮುಖಂಡರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.
ಇದೇ ವೇಳೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಪತ್ರಕರ್ತರಾದ ತಾರನಾಥ್ , ಜಗನ್ನಾಥ್ ಶೆಟ್ಡಿ ಬಾಳ, ಇರ್ಷಾದ್ ಉಪ್ಪಿನಂಗಡಿ, ಶ್ರೀನಿವಾಸ ಇಂದಾಜೆ, ಅಪುಲ್ ಇರಾ, ಸುಕೇಶ್ ಕುಮಾರ್ ಶೆಟ್ಟಿ. ಆರೀಫ್ ಕಲಕಟ್ಟಾಮೊದಲಾದವರು ಉಪಸ್ಥಿತರಿದ್ದರು.