ಮಂಗಳೂರು: ಮಂಗಳೂರಿನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಮಂಗಳೂರು ಚಲೋ ಬೈಕ್ ರ್ಯಾಲಿಗೆ ಪೊಲೀಸರು ತಡೆಯೊಡ್ಡಿದ್ದಾರೆ. ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಪೊಲೀಸರ ನಡುವೆ ವಾಗ್ಚಾದ ನಡೆಯಿತು. ಜ್ಯೋತಿ ಸರ್ಕಲ್ ನಿಂದ ಬೈಕ್ ರ್ಯಾಲಿ ನಡೆಸದಂತೆ ಪೊಲೀಸರು ತಡೆದ ಹಿನ್ನೆಲೆ ಕೆರಳಿದ ಸಂಸದ ನಳಿನ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಹಿನ್ನೆಲೆ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.
ಮಾತ್ರವಲ್ಲದೆ, ಬೈಕ್ ರ್ಯಾಲಿಯನ್ನು ತಡೆದ ಸಂದರ್ಭ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿದೆ. ನೂಕುನುಗ್ಗಲಿನ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಈ ಸಂದರ್ಭ ಜಿಲ್ಲಾಧಿಕಾರಿ ಕಚೇರಿ ಸಮೀಪ ತೆರಳಲೆತ್ನಿಸಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಬಂಧಿಸಿದ್ದು, ನಂತರ ಬಿಡುಗಡೆಗೊಳಿಸಲಾಗಿದೆ.