Friday 4th, July 2025
canara news

ಗೌರಿ ಲಂಕೇಶ್ ಹತ್ಯೆ, ಸಿಬಿಐ ತನಿಖೆಗೆ ಜನಾರ್ದನ ಪೂಜಾರಿ ಆಗ್ರಹ

Published On : 08 Sep 2017   |  Reported By : Canaranews Network


ಮಂಗಳೂರು: 'ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಒಂದು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಪ್ರಕರಣದ ತನಿಖೆಯನ್ನು ಈ ಕೂಡಲೇ ಸಿಬಿಐಗೆ ವಹಿಸಬೇಕು' ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಒತ್ತಾಯಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸುತ್ತೇನೆ.
ಈ ಕೃತ್ಯ ಒಂದು ದಿನದಲ್ಲಿ ಮಾಡಿದ್ದಲ್ಲ ಇದೊಂದು ಪೂರ್ವ ನಿಯೋಜಿತ ಹತ್ಯೆ' ಎಂದು ಅಭಿಪ್ರಾಯಪಟ್ಟರು. ಗೌರಿ ಲಂಕೇಶ್ ಅವರಿಗೆ ಬೆದರಿಕೆ ಇದೆ.

ಅವರಿಗೆ ಭದ್ರತೆ ನೀಡಬೇಕೆಂದು ಗೌರಿ ಲಂಕೇಶ್ ಸಹೋದರ ಇಂದ್ರಜಿತ್ ಲಂಕೇಶ್ ಹಾಗೂ ಅವರ ತಾಯಿ ಕೂಡ ಕೇಳಿದ್ದರು' ಎಂದು ಪೂಜಾರಿ ಹೇಳಿದರು.'ಸರ್ಕಾರ ಗೌರಿ ಲಂಕೇಶ್ ಅವರಿಗೆ ಭದ್ರತೆ ಒದಗಿಸುವ ಬಗ್ಗೆ ನಿರ್ಲಕ್ಷ್ಯ ತೋರಿದೆ. ಚಿಂತಕರಾದ ಪ್ರೊ.ಎಂ.ಎಂ ಕಲಬುರ್ಗಿ, ನರೇಂದ್ರ ದಾಬೋಲ್ಕರ್ ಅವರ ಬಳಿಕ ಗೌರಿ ಲಂಕೇಶ್ ಅವರದ್ದು ಮೂರನೇ ಹತ್ಯೆಯಾಗಿದೆ' ಎಂದು ಪೂಜಾರಿ ವಿಷಾದ ವ್ಯಕ್ತಪಡಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here