Wednesday 24th, April 2024
canara news

ಕಾವ್ಯ ನಿಗೂಢ ಸಾವಿನ ಪ್ರಕರಣ: ದ.ಕ.'ಜಿಲ್ಲಾ ಬಂದ್'ಗೆ ಕರೆ ನೀಡಲು ಚಿಂತನೆ

Published On : 08 Sep 2017   |  Reported By : Canaranews network


ಮಂಗಳೂರು: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ನಿಗೂಢ ಸಾವಿನ ಪ್ರಕರಣದಲ್ಲಿ ನ್ಯಾಯ ಒದಗಿಸಲು ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಕರೆ ನೀಡಲು 'ಜಸ್ಟಿಸ್ ಫಾರ್ ಕಾವ್ಯ' ಹೋರಾಟ ಸಮಿತಿ ನಿರ್ಧರಿಸಿದೆ. ಕಾವ್ಯಾ ಸಾವಿಗೆ ನ್ಯಾಯಕ್ಕೆ ಆಗ್ರಹಿಸಿ ಮಂಗಳೂರಿನಲ್ಲಿ ಉಪವಾಸ ಸತ್ಯಗ್ರಹ ಈ ಕುರಿತು ಬುಧವಾರ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಮಹತ್ವದ ಸಭೆ ಕರೆಯಲಾಗಿದೆ.

'ಜಸ್ಟಿಸ್ ಫಾರ್ ಕಾವ್ಯ' ಹೋರಾಟ ಸಮಿತಿಯಲ್ಲಿ 40 ಸಂಘಟನೆಗಳಿದ್ದು ಸಪ್ಟೆಂಬರ್ 6 ರಂದು ಬುಧವಾರ ನಗರದ ಆರ್ಯ ಸಮಾಜದಲ್ಲಿ ಜಿಲ್ಲಾ ಬಂದ್ ಕರೆ ನೀಡುವ ಕುರಿತು ತೀರ್ಮಾನ ಕೈಗೊಳ್ಳಲು ಸಭೆ ಕರೆಯಲಾಗಿದೆ.ಕಾವ್ಯ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಪೊಲೀಸ್ ಇಲಾಖೆ ದಾಖಲೆಗಳ ಮೂಲಕ ಸತ್ಯಾಂಶ ಬಯಲುಗೊಳಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಜಸ್ಟಿಸ್ ಫಾರ್ ಕಾವ್ಯ ಹೋರಾಟ ಸಮಿತಿ ಸೆಪ್ಟೆಂಬರ್ 16 ರಂದು ಸ್ವಯಂ ಪ್ರೇರಿತ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡುವ ಸಂಭವವಿದೆ ಎಂದು ಸಮಿತಿಯ ದಿನಕರ್ ಶೆಟ್ಟಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ 40 ಸಂಘಟನೆಗಳ ಮುಖಂಡರಿಗೆ ಸಭೆಗೆ ಆಹ್ವಾನಿಸಲಾಗಿದೆ. ಬುಧವಾರ ಆರ್ಯ ಸಮಾಜದಲ್ಲಿ ನಡೆಯಲಿರುವ ಸಭೆಯಲ್ಲಿ ಬಂದ್ ಕುರಿತು ಮಹತ್ವದ ನಿರ್ಧಾರ ಹೊರಬೀಳಲಿದೆ .

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here