Wednesday 24th, April 2024
canara news

ಗೌರಿ ಲಂಕೇಶ್‌ ಕೊಲೆಗೆ ವ್ಯಾಪಕ ಖಂಡನೆ

Published On : 08 Sep 2017   |  Reported By : Canaranews network


ಮಂಗಳೂರು: ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್‌ ಅವರ ಹತ್ಯೆಗೆ ವ್ಯಾಪಕ ಖಂಡನೆ ಮತ್ತು ಪ್ರತಿಭಟನೆ ವ್ಯಕ್ತವಾಗಿದೆ. ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್‌ ವತಿಯಿಂದ ಸಂಜೆ ಲಾಲ್‌ಬಾಗ್‌ ಜಂಕ್ಷನ್‌ ಎದುರು ಮೊಂಬತ್ತಿ ಉರಿಸಿ ಗೌರಿ ಲಂಕೇಶ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ನಡೆಯಿತು.

ಮಹಿಳಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷರಾದ ಶಾಲೆಟ್‌ ಪಿಂಟೊ, ರಾಜ್ಯ ಉಪಾಧ್ಯಕ್ಷರಾದ ಮಮತಾ ಡಿ.ಎಸ್‌. ಗಟ್ಟಿ ಹಾಗೂ ಮೇಯರ್‌ ಕವಿತಾ ಸನಿಲ್‌ ಅವರು ಮಾತನಾಡಿ ಗೌರಿ ಲಂಕೇಶ್‌ ಅವರ ಹತ್ಯೆಯನ್ನು ಖಂಡಿಸಿದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರಸ್‌ ಕ್ಲಬ್‌ ವತಿಯಿಂದ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here