Thursday 2nd, May 2024
canara news

ತುಳುನಾಡಿನ ಇತಿಹಾಸ ಸಾರುವ ಅಪೂರ್ವ ಶಾಸನ ಪತ್ತೆ

Published On : 19 Sep 2017   |  Reported By : canaranews network


ಮಂಗಳೂರು: ತುಳುನಾಡಿನ ಇತಿಹಾಸ ಸಾರುವ ಅಪೂರ್ವ ಶಾಸನವೊಂದು ಪತ್ತೆಯಾಗಿದೆ. ಶ್ರೀ ಕ್ಷೇತ್ರ ಪೊಳಲಿ ದೇಗುಲದ ಜೀರ್ಣೋದ್ಧಾರ ಕಾಮಗಾರಿ ಸಂದರ್ಭದಲ್ಲಿ ಈ ಶಾಸನ ಪತ್ತೆಯಾಗಿದೆ.

ಬಂಟ್ವಾಳದ ಪುರಾಣ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಾಲಯದ ಜೀರ್ಣೋದ್ಧಾರ ಕಾರ್ಯಗಳು ತ್ವರಿತಗತಿಯಿಂದ ಸಾಗುತ್ತಿದ್ದು ಈ ಸಂದರ್ಭದಲ್ಲಿ ನಡೆಯುತ್ತಿದ್ದ ಕಾಮಗಾರಿ ವೇಳೆ ಈ ಅಪೂರ್ವ ಶಿಲಾಶಾಸನ ಪತ್ತೆಯಾಗಿದೆ. ಈ ಶಾಸನ ಅಳುಪ ವಂಶದ ಅರಸ ಕುಲಶೇಖರನ ಆಳ್ವಿಕೆಯ ಕಾಲದ್ದು ಎಂದು ಹೇಳಲಾಗಿದೆ.

ಈ ಶಾಸನ ಸುಮಾರು 28 ಇಂಚು ಎತ್ತರ ಹಾಗೂ ಮೇಲ್ಭಾಗದಲ್ಲಿ ಸುಮಾರು 24 ಇಂಚು ಅಗಲವಿದ್ದು, ನೋಡಲು ಸುಂದರವಾಗಿದೆ. ಈ ಶಿಲಾ ಫಲಕದಲ್ಲಿ ಅಕ್ಷರಗಳನ್ನು ಇಪ್ಪತ್ತು ಸಾಲುಗಳಲ್ಲಿ ಅತ್ಯಂತ ಸ್ಫುಟವಾಗಿ ಕೆತ್ತಲಾಗಿದೆ. ಶಾಸನ ಫಲಕದ ತಳಭಾಗದಲ್ಲಿ ಎರಡು ಸಿಂಹಗಳ ಮಧ್ಯೆ ಒಬ್ಬ ವ್ಯಕ್ತಿಯು ರಾಜ ಭಂಗಿಯಲ್ಲಿ ಸ್ತ್ರೀಯೊಂದಿಗೆ ಆಸೀನರಾಗಿರುವ ಚಿತ್ರವಿದೆ.

ಈ ಶಾಸನವನ್ನು ಪರಿಶೀಲಿಸಿ ಅಧ್ಯಯನ ಮಾಡಿದ ಇತಿಹಾಸ ಸಂಶೋಧಕ ಡಾ. ಗಣಪಯ್ಯ ಭಟ್ ಇದರ ಕುರಿತು ವಿವರಣೆ ನೀಡಿದ್ದಾರೆ. "ಅಳುಪ ವಂಶದ ಅರಸನಾದ ಕುಲಶೇಖರ ವೀರ ಸಾಹಸ ಮೆರೆದ ವಿಚಾರವನ್ನು ಈ ಶಾಸನದಲ್ಲಿ ವಿವರಿಸುತ್ತದೆ" ಎಂದಿದ್ದಾರೆ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here