ಮಂಗಳೂರು : ಕಟೀಲು ಮೇಳದ ಪ್ರಧಾನ ಬಾಗವತರಾಗಿದ್ದ ಕುಬಣೂರು ಶ್ರೀಧರ ರಾವ್ (66) ಸೋಮವಾರ ಬೆಳಿಗ್ಗೆ ಬೆಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿದಾನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಶ್ರೀಧರ್ ರಾವ್ ಅವರು ಸಿಂಗಾಪುರದಲ್ಲಿರುವ ತಮ್ಮ ಮಗಳ ಮನೆಗೆ ಹೋಗಿದ್ದರು. ಅಲ್ಲಿ ಅವರು ಅನಾರೋಗ್ಯ ಪೀಡಿತರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿಗೆ ಕರೆತಂದು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಕಟೀಲು ಮೇಳದ ಪ್ರಧಾನ ಬಾಗವತರಾಗಿದ್ದ ಶ್ರೀಧರ್ ರಾವ್ ಕದ್ರಿಮೇಳ, ನಂದಾವರ, ಅರುವ, ಬಪ್ಪನಾಡು, ಕದ್ರಿ, ಕಾಂತಾವರ ಹೀಗೆ ವಿವಿಧ ಮೇಳಗಳಲ್ಲಿ ಸೇವೆ ಸಲ್ಲಿಸಿ ಕಳೆದ 25 ವರ್ಷಗಳಿಂದ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕುಬಣೂರು ಶ್ರೀಧರ್ ರಾವ್ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.