ಮಂಗಳೂರು : ದ.ಕ.ಜಿಲ್ಲೆಯ ಕುತ್ತಾರು ಘಟಕದ ತುಳುನಾಡ ರಕ್ಷಣಾ ವೇದಿಕೆಯಲ್ಲಿ ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. ಕಚೇರಿಗೆ ನುಗ್ಗಿದ ಕಿಡಿಗೇಡಿಗಳು ಕಛೇರಿಯಲ್ಲಿ ಹಾಕಲಾಗಿದ್ದ ತು.ರ.ವೇ ಹೋರಾಟ ಮತ್ತು ಸಾಧನೆಗಳ ಸಾಕ್ಷಗಳುಲ್ಲ ಬೃಹತ್ ಕಟೌಟನ್ನು ಹಾನಿಗೊಳಿಸಿ ವಿಕೃತಿ ಮೆರೆದಿದ್ದಾರೆ.
ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ತು.ರ.ವೇ ಕಚೇರಿಗೆ ಭಾನುವಾರ ರಾತ್ರಿ ಕಿಡಿಗೇಡಿಗಳು ನುಗ್ಗಿ ಕಟೌಟನ್ನು ಹಾನಿಗೊಳಿಸಿದ್ದಾರೆ.ಘಟನೆಯು ಸೋಮವಾರ ಸಂಜೆ ಬೆಳಕಿಗೆ ಬಂದಿದ್ದು, ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ ತು.ರ.ವೇ ಕ್ಷೇತ್ರಾಧ್ಯಕ್ಷ ಸಿರಾಜ್ ಅಡ್ಕರೆ ಅವರು ತಕ್ಷಣ ಉಳ್ಳಾಲ ಪೊಲೀಸರಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ.