ಮಂಗಳೂರು: ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮುಡಿಪಿನಡ್ಕದಲ್ಲಿರುವ ದೇಯಿ ಬೈದ್ಯೆತಿ ಔಷಧಿ ವನಕ್ಕೆ ಸಚಿವ ರಮಾನಾಥ್ ರೈ ಭೇಟಿ ನೀಡಿದ್ದಾರೆ.
ಈ ಸಂದರ್ಭ ಮಾತನಾಡಿದ ಅವರು ದೇಯಿ ಬೈದ್ಯೆತಿ ಪ್ರತಿಮೆಗೆ ಅವಮಾನ ಮಾಡಿದ ಅಹಿತರ ಘಟನೆಯೊಂದು ನಡೆದು ಹೋಗಿದೆ. ಇದು ಖಂಡನೀಯ ಎಂದು ಹೇಳಿದರು."ತಪ್ಪು ಯಾರೇ ಮಾಡಿದರೂ ಅದು ತಪ್ಪೇ. ಅದನ್ನು ತಪ್ಪು ಎಂದು ಹೇಳಲು ಯಾವುದೇ ಮುಜುಗರವಿಲ್ಲ. ಇದನ್ನು ನಾವೆಲ್ಲ ಬಲವಾಗಿ ಖಂಡಿಸುತ್ತೇವೆ. ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಕಾನೂನು ಪ್ರಕಾರ ಮುಂದಿನ ವಿಧಾನಗಳು ನಡೆಯುತ್ತವೆ. ಆದರೆ ಈ ಘಟನೆಯ ಹೆಸರಿನಲ್ಲಿ ಜಿಲ್ಲೆ ಸಾಮರಸ್ಯ ಕದಡುವ ಕೆಲಸ ಆಗಬಾರದು," ಎಂದು ಹೇಳಿದರು.