ಮಂಗಳೂರು : ಮಂಗಳೂರು ಹೊರವಲಯದ ಉಳ್ಳಾಲದ ಅಸೈಗೋಳಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಯುವ ಬ್ರಿಗೇಡ್ ಸಂಚಾಲಕ ಚಕ್ರವರ್ತಿ ಸೂಲಿಬೆಲೆಯವರನ್ನು ಕೆಟ್ಟ ಶಬ್ಧದಿಂದ ನಿಂದಿಸಿದ್ದ ಅರಣ್ಯ ಸಚಿವ ರಮಾನಾಥ್ ರೈ ವಿರುದ್ಧ ಖಾಸಗಿ ದೂರು ದಾಖಲಾಗಿದೆ
.ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ರಹೀಂ ಉಚ್ಚಿಲ್ ಅವರು ಮಂಗಳವಾರ ಮಂಗಳೂರಿನ ಎರಡನೇ ನ್ಯಾಯಾಲಯದ ನ್ಯಾಯಿಕ ದಂಡಾಧಿಕಾರಿಗೆ ದೂರು ನೀಡಿದ್ದಾರೆ. ರಹೀಂ ಉಚ್ಚಿಲ್ ಪರ ವಕೀಲ ಎಸ್.ಎಸ್ ಖಾಝಿ ವಾದಿಸಲಿದ್ದಾರೆ.ಸೆಪ್ಟೆಂಬರ್ 22ರಂದು ಉಳ್ಳಾಲದ ಅಸೈಗೋಳಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಯುವ ಬ್ರಿಗೇಡ್ ಸಂಚಾಲಕ ಚಕ್ರವರ್ತಿ ಸೂಲಿಬೆಲೆಯವರನ್ನು ಕೆಟ್ಟ ಶಬ್ಧದಿಂದ ರೈ ನಿಂದಿಸಿದ್ದರು.