Thursday 2nd, May 2024
canara news

ಅ.1--3: ಪಲಿಮಾರುಶ್ರೀಗಳು ಪೇಜಾವರ ಮಠದಲ್ಲಿ ಮೊಕ್ಕಂ ಅ.01ನೇ ಭಾನುವಾರ ತಪ್ತ ಮುದ್ರಾಧಾರಣಾ ಕಾರ್ಯಕ್ರಮ

Published On : 28 Sep 2017   |  Reported By : Rons Bantwal


ಮುಂಬಯಿ, ಸೆ.27: ಮುಂಬರುವ 2018-2020ರ ಉಡುಪಿ ಪರ್ಯಾಯ ಪೀಠವನ್ನೇರಲಿರುವ ಪರ್ಯಾಯ ಸಂಚಾರಕ್ಕೆ ಮುಂಬಯಿ ಮಹಾನಗರಕ್ಕಾಗಮಿಸಿರುವ ಉಡುಪಿ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರು ಇದೇ ಅಕ್ಟೋಬರ್ 01ನೇ ಭಾನುವಾರ ದಿಂದ 03ನೇ ಮಂಗಳವಾರ ತನಕ ಮಹಾನಗರದ ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೋನಿ ಇಲ್ಲಿನ ಉಡುಪಿ ಪೇಜಾವರ ಮಠ ಮುಂಬಯಿ ಶಾಖೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮಠದ ಶಾಖೆಯ ಪ್ರಬಂಧಕ ರಾಮದಾಸ ಉಪಾಧ್ಯಾಯ ರೆಂಜಾಳ ತಿಳಿಸಿದ್ದಾರೆ.

01ನೇ ಭಾನುವಾರ ಪೂರ್ವಾಹ್ನ 11.00 ಗಂಟೆಯಿಂದ ಮಧ್ಯಾಹ್ನ 12.00 ಗಂಟೆ ತನಕ ತಪ್ತ ಮುದ್ರಾ ಧಾರಣಾ ಕಾರ್ಯಕ್ರಮ ನಡೆಸಲಿದ್ದಾರೆ. ಅಂತೆಯೇ 02ನೇ ಸೋಮವಾರ ಮತ್ತು 03ನೇ ಮಂಗಳವಾರ ಕೂಡಾ ದಿನಪೂರ್ತಿಯಾಗಿ ಇಲ್ಲಿದ್ದು ವಿವಿಧ ಪೂಜೆಗಳನ್ನು ನಡೆಸಿ ನೆರೆದ ಭಕ್ತಾಭಿಮಾನಿಗಳಿಗೆ ಮಂತ್ರಾಕ್ಷತೆ ನೀಡಿ ಅನುಗ್ರಹಿಸಲಿದ್ದಾರೆ.

ಶ್ರೀಗಳ ಮೂರು ದಿನಗಳ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಾಡಿನ ಸಮಸ್ತ ಭಕ್ತಾಭಿಮಾನಿಗಳು ಸಹಭಾಗಿಗಳಾಗಿ ಶ್ರೀಕೃಷ್ಣ ದೇವರ ಕೃಪೆಗೆ ಪಾತ್ರರಾಗುವಂತೆ ಪೂರ್ಣಪ್ರಜ್ಞಾ ವಿದ್ಯಾಪೀಠ ಪ್ರತಿಷ್ಠಾನದ ವಿಶ್ವಸ್ಥ ಮಂಡಳಿ ಹಾಗೂ ಪೇಜಾವರ ಮಠ ಮುಂಬಯಿ ಶಾಖೆಯ ಪ್ರಬಂಧಕರುಗಳಾದ ಪ್ರಕಾಶ ಆಚಾರ್ಯ ರಾಮಕುಂಜ, ಹರಿ ಭಟ್ ಮತ್ತು ನಿರಂಜನ್ ಗೋಗ್ಟೆ ಈ ಮೂಲಕ ತಿಳಿಸಿದ್ದಾರೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here