ಮುಂಬಯಿ, ಸೆ 30: ಕರ್ನಾಟಕ ರಾಜ್ಯದಲ್ಲಿನ ಬಂಟರ ಪ್ರತಿಷ್ಠಿತ ಸಂಸ್ಥೆಯಾಗಿ ಗುರುತಿಸಿ ಕೊಂಡಿರುವ ಬಂಟವಾಳದ ಬಂಟರ ಸಂಘ ಮತ್ತು ಆಲ್ಕಾರ್ಗೊ ಲಾಜಿಸ್ಟಿಕ್ ಲಿಮಿಟೆಡ್ ಮುಂಬಯಿ ಸಂಸ್ಥೆಯ ಸಹಯೋಗದೊಂದಿಗೆ ಶೈಕ್ಷಣಿಕ ಮತ್ತು ಸಮಾಜ ಕಲ್ಯಾಣ ಸಮಿತಿಯು ವಿದ್ಯಾಥಿರ್sವೇತನ ವಿತರಣಾ ಕಾರ್ಯಕ್ರಮವನ್ನು ಇದೇ ಅ.01ನೇ ಭಾನುವಾರ ಪೂರ್ವಾಹ್ನ 10.30 ಗಂಟೆಗೆ ಬಿ.ಸಿರೋಡ್ ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿನ ತುಂಬೆ ವಳವೂರು ಇಲ್ಲಿನ ಬಂಟರ ಸಂಘ ಬಂಟವಾಳ ತಾಲೂಕು ಇದರ ಬೆಳ್ಳೂರು ಪರಾರಿ ಆರ್.ಎನ್ ಶೆಟ್ಟಿ ಸಭಾಗೃಹದಲ್ಲಿ ಆಯೋಜಿಸಿದೆ.
Nagrigutt Vivek Shetty Shashikiran Shetty Aarati Shashikiran
ಸಂಘದ ಅಧ್ಯಕ್ಷ, ಮುಂಬಯಿನ ಕೈಗಾರಿಕೋದ್ಯಮಿ, ಹೆಸರಾಂತ ಸಮಾಜ ಸೇವಕ ನಗ್ರಿಗುತ್ತು ವಿವೇಕ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ನಿಟ್ಟೆ ವಿನಯ ಹೆಗ್ಡೆ ಮತ್ತು ಗೌರವ ಅತಿಥಿsಗಳಾಗಿ ಆಲ್ಕಾರ್ಗೊ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಆರತಿ ಶಶಿಕಿರಣ್ ಶೆಟ್ಟಿ, ಸ್ಯಾಂಡಲ್ವುಡ್ ಸಂಗೀತ ನಿರ್ದೇಶಕ ಗುರುಕಿರಣ್ ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಬಂಟರ ಸಂಘದ ಉಪಾಧ್ಯಕ್ಷ ಕಿರಣ್ ಹೆಗ್ಡೆ ಅನಂತಾಡಿ, ಕಾರ್ಯದರ್ಶಿ ಚಂದ್ರ್ರಹಾಸ ಡಿ.ಶೆಟ್ಟಿ, ಕೋಶಾಧಿಕಾರಿ ಜಗಧೀಶ್ ಶೆಟ್ಟಿ ಇರಾ, ಜೊತೆ ಕಾರ್ಯದರ್ಶಿ ನವೀನ್ಚಂದ್ರ ಶೆಟ್ಟಿ ಮುಂಡಜೆಗುತ್ತು ಮತ್ತಿತರÀರು ಉಪಸ್ಥಿತರಿರುವರು.
ಎಲ್ಲಾ ಸಮುದಾಯ, ಜಾತಿಗಳ ಸುಮಾರು ಒಂದುವರೆ ಸಾವಿರ (1,500) ವಿದ್ಯಾಥಿರ್üಗಳಿಗೆ 25 ಲಕ್ಷ ಮೊತ್ತಕ್ಕೂ ಅಧಿಕ ಶೈಕ್ಷಣಿಕ ದೇಣಿಗೆಯನ್ನು ವಿತರಿಸಲಾಗುವುದು ಎಂದು ನಗ್ರಿಗುತ್ತು ವಿವೇಕ್ ಶೆಟ್ಟಿ ತಿಳಿಸಿದ್ದಾರೆ.