Friday 3rd, May 2024
canara news

ಕುದ್ರೋಳಿ ಕ್ಷೇತ್ರದಲ್ಲಿ ಕಲ್ಲಡ್ಕ ಭಟ್ ಗೆ ಮನ್ನಿಸಿ ಎಂದ ಪೂಜಾರಿ

Published On : 30 Sep 2017   |  Reported By : Canaranews network


ಮಂಗಳೂರು: ವೈಭವದ ಕುದ್ರೋಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿ ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಭಾಗಿಯಾಗಿದ್ದರು.

ಪ್ರಭಾಕರ್ ಭಟ್ ಅವರನ್ನು ಸ್ವಾಗತಿಸಿದ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರು, ಕಾಂಗ್ರೆಸ್ ಸರ್ಕಾರದಿಂದ ಆಗಿರುವ ತೊಂದರೆಗೆ ಕ್ಷಮೆಯಾಚಿಸಿದ ಘಟನೆ ನಡೆಯಿತು.

ಗುರುವಾರ ಸಂಜೆ ಆರೆಸ್ಸೆಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಪತ್ನಿ ಸಮೇತರಾಗಿ ಶ್ರೀಕ್ಷೇತ್ರ ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೆ ಭೇಟಿ ನೀಡಿದರು.ಕ್ಷೇತ್ರಕ್ಕೆ ಭೇಟಿ ನೀಡಿ ಶಾರದಾ ಮಾತೆ ಸೇರಿದಂತೆ ನವ ದುರ್ಗೆಯರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಇದೇ ವೇಳೆ ಕ್ಷೇತ್ರದಲ್ಲೇ ಇದ್ದ ಕಾಂಗ್ರೆಸ್ ಮುಖಂಡ ಬಿ.ಜನಾರ್ದನ ಪೂಜಾರಿ ಅವರನ್ನೂ ಭೇಟಿಯಾಗಿ ಕುಶಲೋಪರಿ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಜನಾರ್ಧನ ಪೂಜಾರಿ, 'ನಮ್ಮವರಿಂದ ತಪ್ಪಾಗಿದೆ, ನಿಮಗೆ ಬಹಳ ತೊಂದರೆಯಾಗಿದೆ ಎಂದು ಇದೇ ಸಂದರ್ಭದಲ್ಲಿ ವಿಷಾದ ಸೂಚಿಸಿದರು.

ಕಲ್ಲಡ್ಕ ಶಾಲೆಗೆ ಕೊಲ್ಲೂರು ದೇವಸ್ಥಾನದ ಅನುದಾನ ಕಡಿತ ವಿಚಾರದಲ್ಲಿ ಪೂಜಾರಿ ಸರ್ಕಾರದ ಕ್ರಮವನ್ನು ಟೀಕಿಸಿದ್ದರು.ಇದೇ ವೇಳೆ ಕುದ್ರೋಳಿ ದಸರಾವನ್ನು ಜನಾರ್ಧನ ಪೂಜಾರಿ ಅವರು ನಡೆಸಿಕೊಂಡು ಬಂದ ರೀತಿಯ ಬಗ್ಗೆ ಪ್ರಭಾಕರ ಭಟ್ ಶ್ಲಾಘನೆ ವ್ಯಕ್ತಪಡಿಸಿದರು




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here