Saturday 4th, May 2024
canara news

ಮಂಗಳೂರಿನಲ್ಲಿ ನವದುರ್ಗೆಯರ ದರ್ಶನ ಪಡೆದ ಕೆಪಿಸಿಸಿ ಅಧ್ಯಕ್ಷ

Published On : 30 Sep 2017   |  Reported By : Canaranews network


ಮಂಗಳೂರು: ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥ ದೇವಾಲಯದಲ್ಲಿ ನಡೆಯುತ್ತಿರುವ ನವರಾತ್ರಿ ಸಂಭ್ರಮದಲ್ಲಿ ಕೆಪಿಸಿಸಿ ಅದ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಭಾಗಿಯಾದರು.ಗುರುವಾರ ಮಂಗಳೂರಿಗೆ ಆಗಮಿಸಿದ ಡಾ. ಜಿ ಪರಮೇಶ್ವರ್ ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೆ ಭೇಟಿ ನೀಡಿದರು.

ದೇವಾಲಯದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಜಿ. ಪರಮೇಶ್ವರ್, ಶ್ರೀ ಗೋಕರ್ಣನಾಥ ಹಾಗೂ ನವದುರ್ಗೆಯರ ದರ್ಶನ ಪಡೆದರು.ಒಂಭತ್ತು ದಿನಗಳ ಕಾಲ ಶಾರದಾ ಮಾತೆ ಸಹಿತ ನವದುರ್ಗೆಯರನ್ನು ಪ್ರತಿಷ್ಠಾಪಿಸಿ ನವರಾತ್ರಿಯನ್ನು ಆಚರಿಸಲಾಗುವ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ದಸರಾ ಉತ್ಸವಕ್ಕೆ ದೀಪ ಬೆಳಗುವ ಮೂಲಕ ಜಿ. ಪರಮೇಶ್ವರ್ ಚಾಲನೆ ನೀಡಿದರು.

ಸಂಜೆ ವೇಳೆ ದೇವಸ್ಥಾನಕ್ಕೆ ಭೇಟಿ ನೀಡಿದ ಪರಮೇಶ್ವರ್ ಅವರು ಸಾಯಿಬಾಬಾ, ಹನುಮಾನ್, ಗೋಕರ್ಣನಾಥ, ಗಣೇಶ, ಸುಬ್ರಹ್ಮಣ್ಯ, ಮಹಾಲಕ್ಷ್ಮೀ, ವೀರಭದ್ರ, ನಾರಾಯಣ ಗುರು ಸನ್ನಿಧಾನದಲ್ಲಿ ಪ್ರಾರ್ಥನೆ ಹಾಗೂ ವಿಶೇಷ ಪೂಜೆ ಸಲ್ಲಿಸಿದರು.ಬಳಿಕ ಶಾರದಾ ಮಾತೆ ಸಹಿತ ನವದುರ್ಗೆಯರ ಸನ್ನಿಧಾನದಲ್ಲೂ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಚಿವ ಯು.ಟಿ. ಖಾದರ್, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರಿಗೆ ಸಾಥ್ ನೀಡಿದರು.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here