Saturday 10th, May 2025
canara news

ಮಂಗಳೂರಿಗೆ ಅಮಿತ್ ಶಾ ಭೇಟಿ

Published On : 01 Oct 2017   |  Reported By : Canaranews network


ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಅ. 2ರಿಂದ 4ರ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದು, ಅ. 4ರಂದು ಇಡೀ ದಿನ ಮಂಗಳೂರಿನಲ್ಲಿ ಪಕ್ಷ ಸಂಘಟನೆ ಮತ್ತು ಇತರ ವಿಷಯಗಳ ಬಗ್ಗೆ ಬಿಜೆಪಿ ರಾಜ್ಯ ನಾಯಕರ ಜತೆ ಚರ್ಚೆ, ಪ್ರಮುಖರ ಜತೆ ಸಭೆಯಲ್ಲಿ ಭಾಗವಹಿಸಲಿದ್ದಾರೆ.ಅಮಿತ್ ಶಾ ಅವರು ಕೇರಳದಲ್ಲಿ ಬಿಜೆಪಿ ಹಮ್ಮಿಕೊಂಡಿರುವ 1 ವಾರ ಅವಧಿಯ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಸಂದರ್ಭ ದ.ಕ.ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅ. 2ರಂದು ಸಂಜೆ 6 ಗಂಟೆಗೆ ಶಾ ಮಂಗಳೂರಿಗೆ ಆಗಮಿಸಲಿದ್ದಾರೆ ವಿಮಾನ ನಿಲ್ದಾಣದಿಂದ ಸುಮಾರು 250-300ರಷ್ಟುವಾಹನಗಳ ಮೆರವಣಿಗೆಯಲ್ಲಿ ಅವರನ್ನು ತಲಪಾಡಿ ತನಕ ಕರೆದೊಯ್ದು ಅಲ್ಲಿ ಕೇರಳದ ಬಿಜೆಪಿ ನಾಯಕರು ಸ್ವಾಗತಿಸುವ ಸ್ಥಳದಲ್ಲಿ ಬೀಳ್ಕೊಡುವರು. ಅ. 3ರಂದು ಸಂಜೆ ಮಂಗಳೂರಿಗೆ ವಾಪಸಾಗಿ ವಾಸ್ತವ್ಯ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here