Thursday 18th, April 2024
canara news

ನಾಡೋಜ Prof| ಕೆ.ಎಸ್ ನಿಸಾರ್‍ಅಹಮ್ಮದ್ ಇವರಿಗೆ ‘ಕಾರಂತ ಪುರಸ್ಕಾರ’

Published On : 06 Oct 2017   |  Reported By : Rons Bantwal


ಅ.10 ರಂದು ಮಂಗಳೂರಿನ ಪುರಭವನದಲ್ಲಿ ಪ್ರದಾನ

ಮುಂಬಯಿ, ಅ.05: ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಲ್ಕೂರ ಪ್ರತಿಷ್ಠಾನದ ಸಹಯೋಗದಲ್ಲಿ ಜರಗಲಿರುವ ಡಾ| ಕೋಟ ಶಿವರಾಮ ಕಾರಂತರ 116ನೆಯ ಹುಟ್ಟುಹಬ್ಬ ಆಚರಣೆಯ ಸಮಾರಂಭದಲ್ಲಿ, ಖ್ಯಾತ ಕವಿ ಕರ್ನಾಟಕ ಸರಕಾರದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಲವಾರು ಮಹೋನ್ನತ ಕೃತಿ ರಚನಕಾರ, ಪ್ರಾಧ್ಯಾಪಕ ವಿಮರ್ಶಕ, ವೈಚಾರಿಕ ಬರಹಗಾರ ಪ್ರತಿಷ್ಠಿತ ಮೈಸೂರು ದಸರಾ ಉತ್ಸವವನ್ನು ಉದ್ಘಾಟಿಸಿದ ನಿತ್ಯೋತ್ಸವ ಕವಿ ನಾಡೋಜ Prof| ಕೆ.ಎಸ್. ನಿಸಾರ್ ಅಹಮ್ಮದ್ ಇವರಿಗೆ ‘ಕಾರಂತ ಪುರಸ್ಕಾರ” ನೀಡಿ ಗೌರವಿಸಲಾಗುವುದು.

ಇದೇ ಅ.10ರ ಮಂಗಳವಾರ ಸಂಜೆ 4.00ಕ್ಕೆ ಮಂಗಳೂರು ಅಲ್ಲಿನ ಪುರಭವನದಲ್ಲಿ ಗೌರವ ಪ್ರದಾನ ಮಾಡಲಾಗುವುದು ಎಂಬುದಾಗಿ ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ತ್‍ನ ಅಧ್ಯಕ್ಷ ಪ್ರದೀಪಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here