Saturday 27th, April 2024
canara news

ನ್ಯಾ. ಜಯಂತ್ ಪಟೇಲ್ ವರ್ಗಾವಣೆ ಖಂಡಿಸಿ ವಕೀಲರ ಪ್ರತಿಭಟನೆ

Published On : 05 Oct 2017   |  Reported By : canaranews network


ಮಂಗಳೂರು: ಜಯಂತ್ ಪಟೇಲ್ ರನ್ನು ಅಲಹಾಬಾದ್ ಹೈಕೋರ್ಟ್ ನ ಮೂರನೇ ನ್ಯಾಯಾಮೂರ್ತಿಯಾಗಿ ವರ್ಗಾವಣೆಗೊಳಿಸಿದ ಕೊಲಿಜಿಯಂನ ಕ್ರಮವನ್ನು ಖಂಡಿಸಿ ಮಂಗಳೂರಿನ ವಕೀಲರ ಸಂಘವು ಬುಧವಾರ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿತು. ಬೆಂಗಳೂರಿನಲ್ಲಿಯೂ ವಕೀಲರು ಕಲಾಪ ಬಹಿಷ್ಕರಿಸಿ ಧರಣಿ ನಡೆಸಿದರು."ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್. ಕೆ. ಮುಖರ್ಜಿಯವರು ಇದೇ ಅಕ್ಟೋಬರ್ 9ರಂದು ನಿವೃತ್ತಿಯಾಗುತ್ತಿದ್ದಾರೆ.

ಅವರ ನಂತರ ಎರಡನೇ ಸ್ಥಾನದಲ್ಲಿದ್ದ ಜಯಂತ್ ಪಟೇಲ್ ಅವರಿಗೆ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ನೀಡಬೇಕಿತ್ತು. ಆದರೆ, ದೇಶದ ಹೈಕೋರ್ಟ್ಗಳ ನ್ಯಾಯಮೂರ್ತಿಗಳಲ್ಲೇ ಹಿರಿಯರಾದ ಜಯಂತ್ ಪಟೇಲ್ ರಿಗೆ ಭಡ್ತಿ ನೀಡದೆ 'ಕೊಲಿಜಿಯಂ' ಜಯಂತ್ ಪಟೇಲ್ರಿಗೆ ಹಿಂಭಡ್ತಿ ನೀಡುವ ಮೂಲಕ ಅನ್ಯಾಯ ಎಸಗಿದೆ," ಎಂದು ವಕೀಲರು ಆಕ್ರೋಶ ವ್ಯಕ್ತಪಡಿಸಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here