Thursday 28th, March 2024
canara news

ಮಂಗಳೂರಿನಲ್ಲಿ ಶೈಕ್ಷಣಿಕ ಒತ್ತಡಕ್ಕೆ ಬೇಸತ್ತು ಬಾಲಕ ಆತ್ಮಹತ್ಯೆ ಯತ್ನ

Published On : 09 Oct 2017   |  Reported By : Canaranews network


ಮಂಗಳೂರು: ಶೈಕ್ಷಣಿಕ ಒತ್ತಡಗಳಿಂದ ಬೇಸತ್ತು ಶಾಲಾ ಬಾಲಕನೋರ್ವ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಮ್ಗಳೂರು ನಗರದ ಹೊರವಲಯದ ಆಡುಮರೋಳಿ ಎಂಬಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಬಾಲಕ ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿಯಾಗಿದ್ದು, 10ನೇ ತರಗತಿಯಲ್ಲಿ ಕಲಿಯುತ್ತಿದ್ದ . ಆತ್ಮಹತ್ಯೆಗೆ ಮೊದಲು ಸೂಸೈಡ್ ನೋಟ್ ಬರೆದಿರುವ ಬಾಲಕ ಶಿಕ್ಷಣದ ಒತ್ತಡಗಳಿಂದ ಬೇಸತ್ತಿರುವುದು ಸ್ಪಷ್ಟವಾಗಿದೆ.

ಸೂಸೈಡ್ ನೋಟ್ ನಲ್ಲಿ "ನೋ ಮೋರ್ ಸ್ಟಡಿ " ಎಂದು ಬರೆದಿರುವುದಾಗಿ ತಿಳಿದು ಬಂದಿದೆ .ಘಟನೆಯಲ್ಲಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ . ಘಟನೆ ಕುರಿತು ಕಂಕನಾಡಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here