ಉಡುಪಿ : ವೆಲ್ಫೇರ್ ಫಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಹಮೀದ್ ಫರಾನ್ ನಾಳೆ 16ರಂದು ಉಡುಪಿಯಲ್ಲಿ ನಡೆಯುವ ಜಿಲ್ಲಾ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಅವರು ಹಿರಿಯ ರಾಜಕೀಯ ಧುರೀಣರಾಗಿದ್ದು, ಕಳೆದ ಲೋಕಸಭಾ ಚುನಾವಣೆಯಲಿ ಬೀದರ್ ಕ್ಷೇತ್ರದಿಂದ ಸ್ಪರ್ಧಿಸಿ ಗಮನಾರ್ಹ ಮತಗಳನ್ನು ಗಳಿಸಿದ್ದರು. ಉಡುಪಿಯ ಹೊಟೇಲ್ ದುರ್ಗಾ ಇಂಟರ್ನ್ಯಾಶನಲ್ನಲ್ಲಿ ಸಂಜೆ 4.30ಕ್ಕೆ ನಡೆಯುವ ಜಿಲ್ಲಾ ಮಟ್ಟದ ಹಿತೈಷಿಗಳ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇವರೊಂದಿಗೆ ರಾಜ್ಯದ ಪ್ರಧಾನ ಕಾರ್ಯದರ್ಶಿ ತಾಹೀರ್ ಹುಸೈನ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.