ಮಂಗಳೂರು: ಹೆದ್ದಾರಿಯಲ್ಲಿ ಸಾಗುವ ವಾಹನಗಳನ್ನು ತಡೆದು ದರೋಡೆ ನಡೆಸುತ್ತಿದ್ದ 5 ಮಂದಿ ಆರೋಪಿಗಳನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ . ಬಂಧಿತರನ್ನು ಪುತ್ತೂರಿನ ರವಿಕುಮಾರ್, ಕೇರಳದ ಮಂಜೇಶ್ವರ ಕುಂಜತ್ತೂರು ನಿವಾಸಿಗಳಾದ ಖಲೀಲ್, ರಾಜೇಶ್ ಕೆ, ಅಝೀಮ್, ಜಾಬೀರ್ ಅಬ್ಬಾಸ್ ಎಂದು ಗುರುತಿಸಲಾಗಿದೆ.
ಮಂಗಳೂರು ಹೊರವಲಯದ ಕಲ್ಲಾಪು ಎಂಬಲ್ಲಿ ಕೇರಳದಿಂದ ಮಂಗಳೂರು ಹೋಗುವ ಹಾಗೂ ಮಂಗಳೂರು ವಿಮಾನ ನಿಲ್ದಾಣದಿಂದ ಕಾಸರಗೋಡಿನತ್ತ ಸಾಗುವ ವಾಹನಗಳನ್ನು ನಿರ್ಜನ ಪ್ರದೇಶದಲ್ಲಿ ತಡೆದು ಪ್ರಯಾಣಿಕರನ್ನು ದರೋಡೆ ಮಾಡುತ್ತಿದ್ದರು ಎಂದು ಹೇಳಲಾಗಿದೆ.ಬಂಧಿತರಿಂದ ಮಾರಕಾಸ್ತ್ರಗಳು , ಕಬ್ಬಿಣದ ರಾಡು, ಮೆಣಸಿನ ಪುಡಿ , ಚೂರಿ ಹಾಗೂ ಮಾರುತಿ ಸಿಫ್ಟ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳ್ಳಾಲ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.