Friday 19th, April 2024
canara news

ತುಳುವರ ಬೇಡಿಕೆ ಮುಂದಿಡಲು ಟ್ವೀಟರ್ ಅಭಿಯಾನ

Published On : 25 Oct 2017   |  Reported By : canaranews network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಅ. 29ರಂದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುವ ಸಾಧ್ಯತೆ ಇರುವುದರಿಂದ ತುಳುವರ ಬೇಡಿಕೆಯನ್ನು ಪ್ರಧಾನಿಗೆ ತಲುಪಿಸಲು ತುಳುನಾಡು ಯೂನಿಫಿಕೇಶನ್ ಸಂಘಟನೆಯು ಇನ್ನೊಂದು ಟ್ವಿಟರ್ ಅಭಿಯಾನಕ್ಕೆ ಮುಂದಾಗಿದೆ. ಇದರಲ್ಲಿ ಎಲ್ಲ ಟ್ವೀಟ್ಗಳನ್ನು ರಾಜ್ಯವನ್ನು ಪ್ರತಿನಿಧಿಸುವ ಸಂಸದರಿಗೆ ಟ್ಯಾಗ್ ಮಾಡಲು ನಿರ್ಧರಿಸಲಾಗಿದೆ.

ಅ. 29ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಇದೇ ವೇಳೆ ದ.ಕ.ಜಿಲ್ಲೆಗೂ ಬರುವ ಸಾಧ್ಯತೆ ಇರುವುದರಿಂದ ಸಂಘಟನೆಯು ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕು ಸೇರಿದಂತೆ ತುಳುವರ ಬೇಡಿಕೆಯನ್ನು ಪ್ರಧಾನಿಯವರ ಮುಂದಿಡಲು ಸಾಮಾಜಿಕ ತಾಣ ಟ್ವೀಟರನ್ನು ಬಳಸಿಕೊಂಡಿದೆ.ಅ. 28 ಮತ್ತು 29ರಂದು ಟ್ವೀಟರ್ ಅಭಿಯಾನ ನಡೆಯಲಿದ್ದು, ಯಾವುದೇ ಟಾರ್ಗೆಟ್ ಇಡಲಾಗಿಲ್ಲ. ಯಾರು ಬೇಕಾದರೂ ಭಾಗವಹಿಸಬಹುದು. ಮಾಡಿದ ಎಲ್ಲ ಟ್ವೀಟ್ಗಳನ್ನು ರಾಜ್ಯದ ಸಂಸದರಿಗೆ ಟ್ಯಾಗ್ ಮಾಡಲಾಗುತ್ತದೆ. ಪ್ರಮುಖವಾಗಿ ಜಿಲ್ಲೆಯ ನಾಯಕರಾದ ಡಿ.ವಿ. ಸದಾ ನಂದ ಗೌಡ, ನಳಿನ್ ಕುಮಾರ್ ಕಟೀಲು ಅವರಿಗೆ ಟ್ಯಾಗ್ ಮಾಡಿ ತುಳುನಾಡಿನ ಧ್ವನಿಯನ್ನು ಪ್ರಧಾನಿಯವರಿಗೆ ತಲುಪಿಸುವ ಪ್ರಯತ್ನ ನಡೆಯಲಿದೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here