ಮಂಗಳೂರು:ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ತುಳುನಾಡಿನ ಮಾತೃಭಾಷೆಯಾಗಿರುವ ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸೇರಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಮನವಿ ಮಾಡಿದರು.
ಸನ್ಮಾನ್ಯ ಪ್ರಧಾನಿ ಮಂತ್ರಿಯವರೆ, ತುಳುನಾಡು ಮತ್ತು ತುಳು ಜನತೆಯ ಪರವಾಗಿ ತಮಗೆ ಆತ್ಮೀಯ ಸ್ವಾಗತ ಮತ್ತು ಅಭಿನಂದನೆಗಳು. ನಮ್ಮ ಮಾತೃಭಾಷೆ ತುಳು. ಈ ಭಾಷೆಗೆ ಇನ್ನೂ ದೇಶದ ಇತರ ಭಾಷೆಗಳಂತೆ ನ್ಯಾಯವಾಗಿ ಸಲ್ಲಬೇಕಾದ ಮಾನ್ಯತೆ ದೊರೆತಿಲ್ಲ. 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಮನವಿ ಮಾಡಿದ್ದಾರೆ.