Friday 29th, March 2024
canara news

ಗಾಂಜಾ ಮತ್ತಿನಲ್ಲಿ ತೇಲುತ್ತಿದ್ದವರು ಪೊಲೀಸ್ ವಶ

Published On : 30 Oct 2017   |  Reported By : Canaranews network


ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ 7 ಮಂದಿ ಆರೋಪಿಗಳನ್ನು ಮಂಗಳೂರು ರೌಡಿ ನಿಗ್ರಹ ದಳದ ಪೊಲೀಸರು ಪ್ರತ್ಯೇಕ ಕಾರ್ಯಚರಣೆಯಲ್ಲಿ ಬಂಧಿಸಿದ್ದಾರೆ.ಇವರನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಡಪಟ್ಟಿದ್ದೆ. ವೆಲೆನ್ಸಿಯಾದ ಮಹಮ್ಮದ್ ರಮ್ಲಾನ್, ಮಾರ್ನಮಿಕಟ್ಟೆಯ ಅಂಕಿತ್ ಶೆಟ್ಟಿ, ಕದ್ರಿಯ ಶುಭಂ, ಶಾನ್ ರೋಡ್ರಿಗಸ್, ಜೆಪ್ಪು ನಿವಾಸಿ ಗಣೇಶ್ ಪೂಜಾರಿ ಕೊಟ್ಟಾರ ಚೌಕಿಯ ಪ್ರವೀಣ್ ಹಾಗೂ ರಂಜಿತ್ ದೇವಾಡಿಗ ಬಂಧಿತ ಆರೋಪಿಗಳು. ಆರೋಪಿಗಳನ್ನು ಕೋಡಿಕ್ಕಲ್ ಮೈದಾನದ ಬಳಿಯಿಂದ ವಶಕ್ಕೆ ಪಡೆಯಲಾಗಿದೆ. ಬಳಿಕ ಇವರನ್ನು ತಪಾಸಣೆಗೊಳಪಡಿಸಿದಾಗ ಗಾಂಜಾ ಸೇವಿಸಿರುವುದು ತಿಳಿದು ಬಂದಿದೆ. ಆರೋಪಿಗಳನ್ನು ಉರ್ವಾ ಠಾಣಾ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಎನ್ ಡಿ ಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here