ಮುಂಬಯಿ, ಅ.30: ಕರ್ನಾಟಕ ಸಮಾಜ ಸೂರತ್ (ರಿ.) ಸಂಸ್ಥೆಯು ಇದೇ (ನ.01ನೇ) ಬುಧವಾರ ಮಧ್ಯಾಹ್ನ 1.00 ಗಂಟೆಯಿಂದ ಗುಜರಾತ್ ರಾಜ್ಯದ ಸೂರತ್ ನಗರದ ನಾನ್ಪುರಾ ಅಲ್ಲಿನ ಜೀವನ ಭಾರತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಮತ್ತು ಮಾನಿಷಾದ ಯಕ್ಷಗಾನ ಕಾರ್ಯಕ್ರಮ ಆಯೋಜಿಸಿದೆ.
Meena Manjunath Patla Satish Shetty
Ramachandra V.Shetty Manoj C.Pojjari
ಸೂರತ್ನ ಆದಾಯ ತೆರಿಗೆ ಇಲಾಖಾ ಆಯುಕ್ತ ಶ್ರೀನಿವಾಸ ಬಿದರಿ ಅಧ್ಯಕ್ಷತೆಯಲ್ಲಿ ಜರುಗುವ ಸಮಾರಂಭ ದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಮಂಗಳೂರು ಸಂಸ್ಥಾಪಕಾಧ್ಯಕ್ಷ, ಯಕ್ಷಚಕ್ರೇಶ್ವರ ಪಟ್ಲ ಸತೀಶ್ ಶೆಟ್ಟಿ ಮುಖ್ಯ ಅತಿಥಿüಯಾಗಿ ಆಗಮಿಸಲಿದ್ದು ಸೂರತ್ನ ಹಿರಿಯ ತುಳುಕನ್ನಡತಿ, ಸಮಾಜ ಸೇವಕಿ ವಿೂನಾ ಮಂಜುನಾಥ್ ಶೆಟ್ಟಿಗಾರ್ ಸಂಭ್ರಮ ಉದ್ಘಾಟಿಸಲಿದ್ದಾರೆ ಎಂದು ಅಧ್ಯಕ್ಷ ಮೋಹನ್ ಸಿ.ಪೂಜಾರಿ ತಿಳಿಸಿದ್ದಾರೆ.
ಸಮಾರಂಭದಲ್ಲಿ ಕರ್ನಾಟಕ ಸಮಾಜದ ಗೌರವಾಧ್ಯಕ್ಷ ರಾಮಚಂದ್ರ ವಿ.ಶೆಟ್ಟಿ, ಉಪಾಧ್ಯಕ್ಷರುಗಳಾದ ದಿನೇಶ್ ಶೆಟ್ಟಿ, ರಮೇಶ್ ಭಂಡಾರಿ, ಉಮೇಶ್ ಸಫಲಿಗ, ಅಜಿತ್ ಶೆಟ್ಟಿ, ಕೋಶಾಧಿಕಾರಿ ರಾಮಕೃಷ್ಣ ಮೂಲ್ಯ ಉಪಸ್ಥಿತರಿದ್ದು ಅತಿಥಿüಗಳನ್ನು ಸನ್ಮಾನಿಸುವರು ಹಾಗೂ ಕ್ರೀಡಾ ಕೂಟದ ವಿಜೇತರಿಗೆ ಬಹುಮಾನ ವಿತರಿಸುವರು ಎಂದು ಸಂಘಟನಾ ಕಾರ್ಯದರ್ಶಿ ಸಂತೋಷ್ ವಿ.ಶೆಟ್ಟಿ ತಿಳಿಸಿದ್ದಾರೆ.
ಸೂರತ್ನ ಕಲಾವಿದರು ವೈವಿಧ್ಯಮಯ ನೃತ್ಯಾವಳಿ, ಮನೋರಂಜನಾ ಕಾರ್ಯಕ್ರಮ ನೀಡಲಿದ್ದು ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರ ಕೂಡುವಿಕೆ ಮತ್ತು ಪಟ್ಲ ಸತೀಶ್ ಶೆಟ್ಟಿ ಭಾಗವತಿಕೆಯಲ್ಲಿ `ಮಾನಿಷಾದ' ಯಕ್ಷಗಾನ ಪ್ರದರ್ಶಿಸುವರು ಎಂದು ಜೊತೆ ಕಾರ್ಯದರ್ಶಿ ಶಾಂತಿ ಡಿ.ಶೆಟ್ಟಿ ತಿಳಿಸಿದ್ದಾರೆ.
ಆ ಪ್ರಯುಕ್ತ ನಾಡಿನ ಸಮಸ್ತ ತುಳುಕನ್ನಡಿಗ ಬಂಧುಗಳು, ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಕನ್ನಡಾಭಿಮಾನಿಗಳು ಆಗಮಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಗೌ| ಪ್ರ| ಕಾರ್ಯದರ್ಶಿ ವನಿತಾ ಜೆ.ಶೆಟ್ಟಿ ಈ ಮೂಲಕ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.