ಮಂಗಳೂರು: ರಾಜ್ಯದಲ್ಲಿ ಇಂದು ಸಂಭ್ರಮದ 62ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಆದರೆ, ರಾಜ್ಯದ ಗಡಿ ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ ಆಚರಿಸುತ್ತಿದೆ. ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಕರಾಳ ದಿನ ಆಚರಿಸಿದೆ.ತುಳುವರು ತಮ್ಮ ವಾಟ್ಸ್ಆ್ಯಪ್ ಪ್ರೊಫೈಲ್ ಚಿತ್ರವನ್ನು ಬ್ಲ್ಯಾಕ್ ಡೇ ಎಂದು ಹಾಕುವ ಮೂಲಕ ಕರಾಳ ದಿನವನ್ನಾಗಿ ಆಚರಿಸಿದ್ದಾರೆ.
ದಶಕಗಳಿಂದ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಸೇರಿದಂತೆ ಹಲವಾರು ಬೇಡಿಕೆಗಳನ್ನು ತುಳು ಭಾಷಿಗರು ಸರ್ಕಾರದ ಮುಂದೆ ಇಡುತ್ತಲೇ ಬಂದಿದ್ದಾರೆ. ಆದರೆ, ಅದ್ಯಾವುದೂ ಈಡೇರಿಲ್ಲ. ಪ್ರತಿ ಸರಕಾರ ತುಳು ಭಾಷೆಯನ್ನು ನಿರ್ಲಕ್ಷ್ಯಿಸಿದೆ ಎಂದು ತುಳುನಾಡು ರಕ್ಷಣಾ ವೇದಿಕೆ ಆರೋಪಿಸಿದೆ.