ಮಂಗಳೂರು: ರಾಜ್ಯ ಸರ್ಕಾರ ಆಚರಿಸಲು ಉದ್ದೇಶಿಸಿರುವ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಸಂಘ ಪರಿವಾರದ ಸಂಘಟನೆಗಳೊಂದಿಗೆ ಸೇರಿ ಶ್ರೀರಾಮ ಸೇನೆ ರಾಜ್ಯದೆಲ್ಲೆಡೆ ತಡೆಯೊಡ್ಡಲಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಸ್ಲಿಂ ಮತಗಳಿಗೋಸ್ಕರ ದೇಶದ್ರೋಹಿ, ಕನ್ನಡ ದ್ರೋಹಿಯಾಗಿದ್ದ ಟಿಪ್ಪು ಸುಲ್ತಾನ್ ಜಯಂತಿಯನ್ನು ರಾಜ್ಯ ಸರ್ಕಾರ ಆಚರಿಸಲು ಹೊರಟಿದೆ .ಒಬ್ಬ ಮತಾಂಧನನ್ನು ವೈಭವೀಕರಿಸಿ ರಾಜ್ಯ ಸರ್ಕಾರ ಜಯಂತಿ ಆಚರಿಸುತ್ತಿರುವುದು ದುರಂತ ಎಂದು ಅವರು ವಿಷಾದ ವ್ಯಕ್ತಪಡಿಸಿದರು.