Thursday 28th, March 2024
canara news

ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ – ಚುರುಕುಗೊಂಡ ತನಿಖೆ

Published On : 04 Nov 2017   |  Reported By : Canaranews network


ಮಂಗಳೂರು: ಡಿವೈಎಸ್ ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ತಂಡವು ತನಿಖೆಯನ್ನು ಮತ್ತಷ್ಟೂ ಚುರುಕುಗೊಳಿಸಿದೆ.ಮಂಗಳೂರಿನಲ್ಲಿ ಪತ್ನಿ ಕೆ.ಕೆ ಪಾವನಾ ಮತ್ತು ಪುತ್ರ ನೇಹಲ್ ಅವರ ಹೇಳಿಕೆ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಿಬಿಐ ಕಚೇರಿಯ ಅಧಿಕಾರಿಗಳ ತಂಡವು ಬೇರೆ ಬೇರೆ ಸ್ತಳಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಕಲೆ ಹಾಕುತ್ತಿದೆ. ಸೋಮವಾರ ಪೇಟೆ ತಾಲ್ಲೂಕಿನ ಕುಶಾಲನಗರ ಸಮೀಪದ ರಂಗ ಸಮುದ್ರದ ಗಣಪತಿ ನಿವಾಸದಲ್ಲಿ ಅವರ ತಂದೆ ಎಂ.ಕೆ ಕುಶಾಲಪ್ಪ, ತಾಯಿ ಜಾಜಿ ಪೂವಮ್ಮ, ಸಹೋದರ ಎಂ.ಕೆ ಮಾಚಯ್ಯ ಹೇಳಿಕೆ ಪಡೆದುಕೊಂಡಿರುವ ಅಧಿಕಾರಿಗಳ ತಂಡ ಹೆಚ್ಚಿನ ಮಾಹಿತಿ ಪಡೆಯುತ್ತೇವೆ ಎಂದು ಕುಟುಂಬದ ಸದಸ್ಯರಿಗೆ ತಿಳಿಸಿದ್ದಾರೆ.ಪ್ರಕರಣದ ಮಾಹಿತಿಯನ್ನು ಗುಟ್ಟಾಗಿ ಸಂಗ್ರಹಿಸುತ್ತಿರುವ ತನಿಖಾ ತಂಡವು ಸ್ಥಳೀಯ ಪೊಲೀಸರ ನೆರವನ್ನೂ ಪಡೆಯದೆ ವಿಚಾರಣೆಯನ್ನು ನಡೆಸುತ್ತಿದ್ದಾರೆ.





More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here