ಮಂಗಳೂರು : ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ (ತಿದ್ದುಪಡಿ) 2017 ಅನ್ನು ವಿರೋಧಿಸಿ ಖಾಸಗಿ ವೈದ್ಯರುಗಳು ನಡೆಸುತ್ತಿರುವ ಪ್ರತಿಭಟನೆಯ ಬಿಸಿ ಮಂಗಳೂರು ರೋಗಿಗಳಿಗೂ ಬಲವಾಗಿ ತಟ್ಟಿದೆ.
ಶುಕ್ರವಾರ ಬೆಳಿಗ್ಗೆ 8 ಗಂಟೆಯಿಂದ ಶನಿವಾರ ಬೆಳಿಗ್ಗೆ 8 ಗಂಟೆಯವರೆಗೆ ಪ್ರತಿಭಟನೆ ಇರಲಿರುವುದರಿಂದ, ಪ್ರತಿಭಟನೆ ಮತ್ತು ಪರಿಸ್ಥಿತಿಯ ಅರಿವಿರದ ರೋಗಿಗಳು ಖಾಸಗಿ ಆಸ್ಪತ್ರೆಗಳತ್ತ ಅಲೆದಾಡುತ್ತಲೇ ಇದ್ದಾರೆ, ಅಲ್ಲಿ ಹೊರರೋಗಿಗಳಿಗೆ ಸೇವೆ ಸಿಗದೆ ನಿರಾಶರಾಗುತ್ತಿದ್ದಾರೆ.
ಮಂಗಳೂರಿನ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಸೇವೆಯನ್ನೂ ಸ್ಥಗಿತಗೊಳಿಸಲಾಗಿದೆ. ಒಳರೋಗಿಗಳಿಗೆ ಮಾತ್ರ ಅವಶ್ಯಕ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇದರಿಂದ ರೋಗಿಗಳಿಗಳಿಗೆ ಹೊರರೋಗಿಗಳ ಘಟಕದಲ್ಲಿ ಮಾತ್ರವಲ್ಲ ತುರ್ತು ಚಿಕಿತ್ಸೆಯೂ ಲಭಿಸುತ್ತಿಲ್ಲ.