ಮಂಗಳೂರು : 'ಕರ್ನಾಟಕ ಬಿಜೆಪಿಯ ಪರಿವರ್ತನಾ ಯಾತ್ರೆಗೆ ಜನ ಬೆಂಬಲವಿಲ್ಲ ಬೆಂಗಳೂರಿನಲ್ಲಿ ಖಾಲಿ ಕುರ್ಚಿಗಳು ಇರುವುದೇ ಅದಕ್ಕೆ ಸಾಕ್ಷಿ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಮಂಗಳೂರು ವಿಮಾನ ನಿಲ್ದಾಣದಲ್ಲಿ ಶನಿವಾರ ಮಾತನಾಡಿದ ಅವರು, 'ಬಿಜೆಪಿಯವರದ್ದು ಪಶ್ಚಾತ್ತಾಪದ ಯಾತ್ರೆ, ಈ ಯಾತ್ರೆಗೆ ಜನ ಬೆಂಬಲವಿಲ್ಲ. ಬೆಂಗಳೂರಿನಲ್ಲಿ ನಡೆದ ಸಮಾವೇಶದಲ್ಲ ಕುರ್ಚಿಗಳು ಖಾಲಿ ಇದ್ದದ್ದು ಇದಕ್ಕೆ ಸಾಕ್ಷಿ' ಎಂದರು.ಕಾಂಗ್ರೆಸ್ ಪಕ್ಷದಿಂದ ಯಾವುದೇ ಯಾತ್ರೆ ಮಾಡುವುದಿಲ್ಲ.
ಎಲ್ಲಾ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಭೆ ನಡೆಸುತ್ತೇವೆ. ಎಲ್ಲಾ ಕ್ಷೇತ್ರದಲ್ಲಿ ನಡೆಯುವ ಸಭೆಗೆ ನಾನೇ ಹೋಗುತ್ತೇನೆ' ಎಂದು ಸಿದ್ದರಾಮಯ್ಯ ತಿಳಿಸಿದರು.