ಮಂಗಳೂರು: ದ್ವಿಚಕ್ರ ವಾಹನ ಸವಾರರು ಚಾಲನೆ ಸಂದರ್ಭದಲ್ಲಿ ಮೊಬೈಲ್ ಫೋನ್ನಲ್ಲಿ ಮಾತನಾಡುತ್ತಿರುವುದು ಅಪಘಾತಗಳಿಗೆ ಕಾರಣವಾಗುತ್ತಿರುವ ಪ್ರಕರಣಗಳು ಹೆಚ್ಚುತಿವೆ.
ಈ ಬಗ್ಗೆ ತಪಾಸಣೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ತಿಳಿಸಿದರು. ಶುಕ್ರವಾರ ತಮ್ಮ ಕಚೇರಿಯಲ್ಲಿ ಜರಗಿದ ಫೋನ್ಇನ್ ಕಾರ್ಯಕ್ರಮದಲ್ಲಿ ಅವರು ಮಹಿಳೆಯೊಬ್ಬರು ಮಾಡಿದ ಕರೆಗೆ ಉತ್ತರಿಸಿದರು.
ಮಂಗಳೂರಿನ ಹೈಲ್ಯಾಂಡ್ನ ಎಸ್.ಎಲ್. ಮಥಾಯಸ್ ರಸ್ತೆಯಲ್ಲಿ ಇತ್ತೀಚೆಗೆ ದ್ವಿಚಕ್ರ ವಾಹನ ಸವಾರರೊಬ್ಬರು ಮೊಬೈಲ್ಫೋನ್ನಲ್ಲಿ ಮಾತನಾಡುತ್ತಾ ಇನ್ನೊಂದು ವಾಹನವನ್ನು ಓವರ್ಟೇಕ್ ಮಾಡುವ ಸಂದರ್ಭದಲ್ಲಿ ಪಾದಚಾರಿ ಮಗುವಿಗೆ ಢಿಕ್ಕಿ ಹೊಡೆದಿತ್ತು.
ಗಂಭೀರವಾಗಿ ಗಾಯಗೊಂಡಿರುವ ಮಗು ಇನ್ನು 3 ತಿಂಗಳು ಮನೆಯೊಳಗೆ ಇರಬೇಕಾದ ಪರಿಸ್ಥಿತಿ ಬಂದಿದೆ. ಆದ್ದರಿಂದ ಮೊಬೈಲ್ನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸುತ್ತಿರುವ ಸವಾರರ ಮೇಲೆ ಕ್ರಮ ಜರಗಿಸಬೇಕು ಎಂದು ಫೋನ್ ಕರೆ ಮಾಡಿದ ಮಹಿಳೆ ಮನವಿ ಮಾಡಿದರು.ಇದನ್ನು ಆಲಿಸಿದ ಕಮಿಷನರ್ ಈ ಕ್ರಮ ಕೈಗೊಂಡಿದ್ದಾರೆ.