ಮಂಗಳೂರು: ಫಲ್ಗುಣಿ ನದಿಗೆ ಸ್ನಾನ ಮಾಡಲು ತೆರಳಿದ್ದ ಐವರು ಮಕ್ಕಳು ನೀರುಪಾಲದ ಘಟನೆ ಬಂಟ್ವಾಳ ತಾಲೂಕಿನ ಮೂಲರಪಟ್ಣದಲ್ಲಿ ನಡೆದಿದೆ.ಅಸ್ಲಾಮ್ ( 17), ರಮೂಜ್ (17), ಅಜಮಾತ್ (18), ಮುಬಾಶಿರ್ (17) ಹಾಗೂ ಸಮಾದ್ (17) ನೀರುಪಾಲಾದ ಮಕ್ಕಳು.ಮಂಗಳವಾರ ಮುಂಜಾನೆ ಸಮಾದ್ ಮೃತದೇಹ ಪತ್ತೆಯಾಗಿದ್ದು, ಇನ್ನುಳಿದ ನಾಲ್ವರ ಮಕ್ಕಳ ಮೃತ ದೇಹಕ್ಕಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ.ಸೋಮವಾರ ಸಂಜೆ ಮನೆಯಿಂದ ಹೋದವರು ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ.
ಇದರಿಂದ ಆತಂಕಗೊಂಡ ಮಕ್ಕಳ ಪೋಷಕರು ಹುಡುಕಾಟ ನಡೆಸಿದ ವೇಳೆ ನದಿಯ ದಡದ ಮೇಲೆ ಮಕ್ಕಳ ಬಟ್ಟೆಗಳು ಪತ್ತೆಯಾಗಿವೆ.ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.