Saturday 4th, May 2024
canara news

ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ

Published On : 15 Nov 2017   |  Reported By : Canaranews network


ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ ಆರಂಭವಾಗಿದೆ. ಶ್ರೀ ಕ್ಷೇತ್ರ ಸೇರಿದಂತೆ ಸುತ್ತಮುತ್ತಲ ಪರಿಸರವೆಲ್ಲ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಮಂಜುನಾಥನಿಗೆ ಅತಿ ಪ್ರಿಯವಾದ ಈ ದೀಪೋತ್ಸವಕ್ಕೆ ಹಿಂದೆ ಮಂಜುನಾಥನ ಸನ್ನಿದಿಯ ಸುತ್ತಲೂ ಒಂದು ಲಕ್ಷ ಹಣತೆಗಳನ್ನು ಉರಿಸುತ್ತಿದ್ದರು.

ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯುತ್ ದೀಪಗಳಿಂದಲೇ ದೇವಾಲಯವನ್ನು ಶೃಂಗರಿಸಲಾಗಿದೆ.ಕಾರ್ತಿಕ ಮಾಸದಂದು ಈ ಲಕ್ಷ ದೀಪೋತ್ಸವ ನಡೆಯುತ್ತಿದ್ದು, ಮಂಜುನಾಥ ಸ್ವಾಮಿ ಈ ಸಂದರ್ಭದಲ್ಲಿ ಕ್ಷೇತ್ರದಿಂದ ಹೊರಗೆ ಸಂಚರಿಸುತ್ತಾನೆ. ವಿವಿಧ ಪ್ರದೇಶಗಳಿಗೆ ಮಂಜುನಾಥನ ಮೂರ್ತಿಯೊಂದಿಗೆ ಮೆರವಣಿಗೆ ಸಾಗಿ ಪ್ರಮುಖ ಐದು ಕಟ್ಟೆಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.

ದೀಪೋತ್ಸವದ ಪ್ರಯುಕ್ತ ಬೆಳ್ಳಿಯ ಬ್ರಹ್ಮರಥೋತ್ಸವವೂ ನಡೆಯಲಿದೆ. ದೇಶ ವಿದೇಶದಿಂದ ಆಗಮಿಸಿದ ಲಕ್ಷಾಂತರ ಮಂದಿ ಭಕ್ತರು ಈ ಅಪೂರ್ವ ಕ್ಷಣವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯುತ್ತಿದೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here