Saturday 5th, July 2025
canara news

ರಮಾನಾಥ ರೈ ವಿರುದ್ದ ಎಸಿಬಿ, ಲೋಕಾಯುಕ್ತಕ್ಕೆ ದೂರು : ಹರಿಕೃಷ್ಣ ಬಂಟ್ವಾಳ್

Published On : 15 Nov 2017   |  Reported By : Canaranews network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ವಿರುದ್ಧ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಸೇರಿದಂತೆ ಎಸಿಬಿಗೆ ದೂರು ನೀಡುವುದಾಗಿ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ತಿಳಿಸಿದರು. ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಚಿವ ರಮಾನಾಥ್ ರೈ ಅವರು ಸರಕಾರಿ ಭೂಮಿಯನ್ನು ಕಬಳಿಸಿರುವ ವಿಚಾರ ಸೇರಿದಂತೆ ತಮ್ಮ ಪತ್ನಿಯ ಹೆಸರಿನಲ್ಲಿ ಅಕ್ರಮ ಆಸ್ತಿ ಸಂಪಾದಿಸಿದ ಕುರಿತು ದಾಖಲೆ ಸಮೇತ ಲೋಕಾಯುಕ್ತರಿಗೆ ದೂರು ನೀಡಲಾಗುವುದು," ಎಂದು ತಿಳಿಸಿದರು.

ಸಚಿವ ರೈ ಅವರ ಎಲ್ಲಾ ಅಕ್ರಮಗಳ ಬಗ್ಗೆ ದಾಖಲೆಗಳು ತನ್ನ ಬಳಿ ಇರುವುದಾಗಿ ಹೇಳಿದ ಅವರು, "ಸಚಿವ ರೈ ಅವರ ಎಲ್ಲಾ ಅಕ್ರಮಗಳ ದಾಖಲೆಗಳನ್ನು ಲೋಕಾಯುಕ್ತ ನ್ಯಾಯಮೂರ್ತಿ ಹಾಗು ಎಸಿಬಿ ಅಧಿಕಾರಿಗಳಿಗೆ ನೀಡುವುದಾಗಿ," ಮಾಹಿತಿ ನೀಡಿದರು. ಸಚಿವ ರೈ ಅವರ ಸರಕಾರಿ ಭೂ ಕಬಳಿಕೆ ಪ್ರಕರಣದ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ತನಿಖೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here