ಮಂಗಳೂರು: ಆಳ್ವಾಸ್ ನುಡಿಸಿರಿ 2017'ಕ್ಕೆ 15 ಸಾಧಕರನ್ನು ಆಯ್ಕೆ ಮಾಡಲಾಗಿದೆ. ಆಳ್ವಾಸ್ ನುಡಿಸಿರಿ ರಾಷ್ಟ್ರೀಯ ಸಮ್ಮೇಳನ - 2017ರ ಸಮಾರೋಪ ಸಮಾರಂಭದಲ್ಲಿ ಕನ್ನಡ ನಾಡು ನುಡಿಗೆ ಸೇವೆ ಸಲ್ಲಿದ ಈ 15 ಮಂದಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.ಬಿಷಪ್ ಹೆನ್ರಿ ಡಿ'ಸೋಜ, ಎಚ್. ಎಸ್. ದೊರೆಸ್ವಾಮಿ, ನಾಡೋಜ ಎನ್.ಸಂತೋಷ್ ಹೆಗ್ಡೆ, ಪ್ರೊ. ತೇಜಸ್ವಿ ಕಟ್ಟೀಮನಿ, ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ, ಡಾ. ವಿಜಯಾದಬ್ಬೆ, ಪ್ರೊ. ಕೆ. ಬಿ. ಸಿದ್ದಯ್ಯ, ಪ್ರೊ. ಜಿ. ಎಚ್. ಹನ್ನೆರಡುಮಠ, ಪ್ರೊ. ಬಿ. ಸುರೇಂದ್ರರಾವ್, ಡಾ. ಎಂ. ಪ್ರಭಾಕರ ಜೋಶಿ, ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ಪದ್ಮರಾಜ ದಂಡಾವತಿ, ರತ್ನಮಾಲಾ ಪ್ರಕಾಶ್, ಡಾ. ತೋನ್ಸೆ ವಿಜಯ್ ಕುಮಾರ್ ಶೆಟ್ಟಿ ಹಾಗೂ ರಥ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅದ್ಯಕ್ಷ ಡಾ.ಎಂ ಮೋಹನ ಆಳ್ವ ಮಾಹಿತಿ ನೀಡಿದ್ದಾರೆ.