Friday 19th, April 2024
canara news

ಬಂಟ್ವಾಳದಲ್ಲಿ ಗರ್ಭಿಣಿ ಮಹಿಳೆ ಮೇಲೆ ಬೀದಿ ನಾಯಿಗಳ ದಾಳಿ

Published On : 19 Nov 2017   |  Reported By : Canaranews network


ಮಂಗಳೂರು: ಎರಡು ದಿನಗಳ ಹಿಂದೆಯಷ್ಟೆ ಮಹಿಳೆಯೊಬ್ಬರು ಬೀದಿ ನಾಯಿ ಕಡಿತಕ್ಕೊಳಗಾಗಿ ಆಸ್ಪತ್ರೆ ಸೇರಿದ ಬೆನ್ನಲ್ಲೇ ಶನಿವಾರ ಬೆಳಿಗ್ಗೆ ಗರ್ಭಿಣಿ ಮಹಿಳೆ ಸಹಿತ ಇಬ್ಬರಿಗೆ ಬೀದಿ ನಾಯಿ ಕಡಿದಿರುವ ಘಟನೆ ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟುವಿನಲ್ಲಿ ನಡೆದಿದೆ.ಭಂಡಾರಿಬೆಟ್ಟುವಿನ ನಿವಾಸಿ ಭಾರತಿ ಹಾಗೂ ಶಾಲಾ ಬಾಲಕ ಕೌಶಿಕ್ ಎಂಬುವವರು ಬೀದಿ ನಾಯಿ ಕಡಿತಕ್ಕೊಳಗಾದವರು.

ಗಾಯಾಳು ಗರ್ಭಿಣಿ ಹೆಂಗಸನ್ನು ಮಂಗಳೂರಿನ ವೆನ್ಲಾಕ್ ಆಸ್ಫತ್ರೆಗೆ ದಾಖಲಿಸಲಾಗಿದ್ದರೆ, ಕೌಶಿಕ್ ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎರಡು ದಿನಗಳ ಹಿಂದೆಯಷ್ಟೆ ಇದೇ ಸ್ಥಳದಲ್ಲಿ ಹೇಮಾವತಿ ಎಂಬ ಮಹಿಳೆಗೆ ಬೀದಿ ನಾಯಿ ಕಡಿದಿತ್ತು.

ಬೀದಿ ನಾಯಿ ಹಾವಳಿಗಳ ಬಗ್ಗೆ ಪುರಸಭೆಗೆ ದೂರು ನೀಡಿದರೂ ಈವರೆಗೂ ಯಾವುದೇ ಕ್ರಮಕೈಗೊಳ್ಳದೆ ಅಸಢ್ಡೆ ವಹಿಸಿದ್ದರಿಂದ ಬೀದಿ ನಾಯಿಗಳ ಉಪಟಳ ಇಲ್ಲಿ ಮಿತಿ ಮೀರಿದೆ. ಪುರಸಭೆಯ ಆಡಳಿತ ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯ ಬಗ್ಗೆ ಆಕ್ರೋಶ ವ್ಯಕ್ತ ವಾಗಿದ್ದು, ಈ ನಾಯಿಗಳ ಕಾಟದಿಂದ ಇನ್ನೆಷ್ಟು ಮಂದಿ ಆಸ್ಪತ್ರೆ ಸೇರಬೇಕು ಎಂದು ಪ್ರಶ್ನಿಸಿದ್ದಾರೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here