Saturday 5th, July 2025
canara news

ಖಾಸಗಿ ವೈದ್ಯರ ಮುಷ್ಕರ; ಪುತ್ತೂರಿನ ವಿದ್ಯಾರ್ಥಿನಿ ಸಾವು

Published On : 19 Nov 2017   |  Reported By : Canaranews network


ಮಂಗಳೂರು: ಖಾಸಗಿ ಆಸ್ಪತ್ರೆಗಳ ವೈದ್ಯರ ಹಠಮಾರಿ ಧೋರಣೆಗೆ ಪುತ್ತೂರಿನ ವಿದ್ಯಾರ್ಥಿನಿಯೋರ್ವಳು ಬಲಿಯಾಗಿದ್ದಾಳೆ. ಪುತ್ತೂರು ವಿವೇಕಾನಂದ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿಯಾಗಿದ್ದ ಪೂಜಾ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಳು.

ವಾರಕ್ಕೆರೆಡು ಬಾರಿ ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ಆಕೆಗೆ ಡಯಾಲಿಸಿಸ್ ನಡೆಯುತ್ತಿತ್ತು.ಮಂಗಳವಾರ ಪುತ್ತೂರು ಸಿಟಿ ಆಸ್ಪತ್ರೆಗೆ ಸೇರಿಸಿದಾಗ ರಕ್ತದಲ್ಲಿ ಸಮಸ್ಯೆ ಇರುವುದು ತಿಳಿಯಿತು. ವೈದ್ಯರು ಡಯಾಲಿಸಿಸ್ ಮಾಡಿಸುವಂತೆ ಸಲಹೆ ನೀಡಿದ್ದರು.

ಮಂಗಳೂರು ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ತೆರಳಿದಾಗ ವೈದ್ಯರು ಲಭ್ಯವಿರಲಿಲ್ಲ. ಹೀಗಾಗಿ ಪುನಃ ಗುರುವಾರ ರಾತ್ರಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಪೂಜಾ ಕೊನೆಯುಸಿರೆಳೆದಿದ್ದಾಳೆ.ವೈದ್ಯರ ಮುಷ್ಕರದಿಂದ ತಮ್ಮ ಮಗಳು ಸಾವನ್ನಪ್ಪಿದ್ದಾಳೆ ಎಂದು ಹೆತ್ತವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here