Friday 3rd, May 2024
canara news

ಖಾಸಗಿ ವೈದ್ಯರ ಮುಷ್ಕರ; ಪುತ್ತೂರಿನ ವಿದ್ಯಾರ್ಥಿನಿ ಸಾವು

Published On : 19 Nov 2017   |  Reported By : Canaranews network


ಮಂಗಳೂರು: ಖಾಸಗಿ ಆಸ್ಪತ್ರೆಗಳ ವೈದ್ಯರ ಹಠಮಾರಿ ಧೋರಣೆಗೆ ಪುತ್ತೂರಿನ ವಿದ್ಯಾರ್ಥಿನಿಯೋರ್ವಳು ಬಲಿಯಾಗಿದ್ದಾಳೆ. ಪುತ್ತೂರು ವಿವೇಕಾನಂದ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿಯಾಗಿದ್ದ ಪೂಜಾ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಳು.

ವಾರಕ್ಕೆರೆಡು ಬಾರಿ ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ಆಕೆಗೆ ಡಯಾಲಿಸಿಸ್ ನಡೆಯುತ್ತಿತ್ತು.ಮಂಗಳವಾರ ಪುತ್ತೂರು ಸಿಟಿ ಆಸ್ಪತ್ರೆಗೆ ಸೇರಿಸಿದಾಗ ರಕ್ತದಲ್ಲಿ ಸಮಸ್ಯೆ ಇರುವುದು ತಿಳಿಯಿತು. ವೈದ್ಯರು ಡಯಾಲಿಸಿಸ್ ಮಾಡಿಸುವಂತೆ ಸಲಹೆ ನೀಡಿದ್ದರು.

ಮಂಗಳೂರು ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ತೆರಳಿದಾಗ ವೈದ್ಯರು ಲಭ್ಯವಿರಲಿಲ್ಲ. ಹೀಗಾಗಿ ಪುನಃ ಗುರುವಾರ ರಾತ್ರಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಪೂಜಾ ಕೊನೆಯುಸಿರೆಳೆದಿದ್ದಾಳೆ.ವೈದ್ಯರ ಮುಷ್ಕರದಿಂದ ತಮ್ಮ ಮಗಳು ಸಾವನ್ನಪ್ಪಿದ್ದಾಳೆ ಎಂದು ಹೆತ್ತವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here