Tuesday 7th, May 2024
canara news

ನಿಯಂತ್ರಣ ತಪ್ಪಿ ವಾಹನಗಳಿಗೆ ಡಿಕ್ಕಿಯಾದ ಕಾರು - ಚಾಲಕ ಸಾವು

Published On : 19 Nov 2017   |  Reported By : Canaranews network


ಮಂಗಳೂರು:ನಿಯಂತ್ರಣ ತಪ್ಪಿದ ಕಾರೊಂದು ಮೂರು ವಾಹನಗಳಿಗೆ ಡಿಕ್ಕಿಯಾಗಿ ಬಳಿಕ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬಡಿದು ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸೇತುವೆ ಬಳಿ ಶನಿವಾರ ನಡೆದಿದೆ.

ಮೃತರನ್ನು ನೆಟ್ಲ ಮುಡ್ನೂರು ಗ್ರಾಮದ ಬಾಬನಕಟ್ಟೆ ನಿವಾಸಿ ಪುತ್ರ ರಾಕೇಶ್ ನಾಯ್ಕ (30) ಎಂದು ಗುರುತಿಸಲಾಗಿದೆ. ನೇರಳಕಟ್ಟೆ ಕೋ- ಅಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗಿಯಾಗಿರುವ ಇವರು, ಬಿ.ಸಿ.ರೋಡ್ ನಲ್ಲಿರುವ ಎಸ್ ಡಿ ಸಿ ಸಿ ಬ್ಯಾಂಕ್ ಗೆ ಹಣ ಜಮೆ ಮಾಡಲೆಂದು ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.ಕಾರ್ ಡ್ರೈವ್ ಮಾಡಿಕೊಂಡು ಬರುತ್ತಿದ್ದ ರಾಕೇಶ್ ನಿಯಂತ್ರಣ ತಪ್ಪಿ ಎದುರಿನಿಂದ ಸಂಚರಿಸುತ್ತಿದ್ದ ಬೊಲೇರೋ ಹಾಗೂ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು,ಬಳಿಕ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬಡಿದು ಪಕ್ಕದ ಗದ್ದೆಗೆ ಉರುಳಿ ಬಿದ್ದಿದ್ದು ಪರಿಣಾಮ ರಾಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಬಂಟ್ವಾಳ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.




More News

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
"ದ ಡಾಪರ್ ಷೋ"
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

Comment Here