Saturday 4th, May 2024
canara news

ಧರ್ಮಸ್ಥಳ: ಸಮವಸರಣ ಪೂಜಾ ವೈಭವ

Published On : 20 Nov 2017   |  Reported By : Rons Bantwal


ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಶನಿವಾರ ರಾತ್ರಿ ಮಹೋತ್ಸವ ಸಭಾ ಭವನದಲ್ಲಿ ಸಮವಸರಣ ಪೂಜಾ ವೈಭವವನ್ನು ಊರ-ಪರವೂರ ಶ್ರಾವಕ-ಶ್ರಾವಕಿಯರು ವೀಕ್ಷಿಸಿ ಪುಣ್ಯ ಸಂಚಯ ಮಾಡಿಕೊಂಡರು. ಉತ್ಸಾಹದಿಂದ ಭಾಗವಹಿಸಿದರು. ಬೀಡಿನಿಂದ (ಹೆಗ್ಗಡೆಯವರ ನಿವಾಸ) ಸಭಾ ಭವನಕ್ಕೆ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ತೀರ್ಥಂಕರರ ಭವ್ಯ ಮೆರವಣಿಗೆ ಬಳಿಕ ಮಹೋತ್ಸವ ಸಭಾ ಭವನದಲ್ಲಿ ಸಮವಸರಣ ಪೂಜೆ ನಡೆಯಿತು.

ಪಂಚ ನಮಸ್ಕಾರ ಮಂತ್ರ ಪಠಣ, ಅಷ್ಟವಿಧಾರ್ಚನೆ ಪೂಜೆ, ಸಂಗೀತ ಪೂಜೆ ಇತ್ಯಾದಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸಾಕ್ಷಾತ್ ಸಮವಸರಣವನ್ನು ಪ್ರತ್ಯಕ್ಷವಾಗಿ ವೀಕ್ಷಿಸಿದಂತಾಯಿತು. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಹೇಮಾವತಿ ವಿ. ಹೆಗ್ಗಡೆಯವರು ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಅನಿತಾ ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಸೋನಿಯಾ ವರ್ಮ ಮೊದಲಾದವರು ಪೂಜೆಯಲ್ಲಿ ಭಾಗವಹಿಸದರು.

ಸ್ಥಳೀಯ ಬಾಹುಬಲಿ ಸೇವಾ ಸಮಿತಿ ಶ್ರಾವಕ-ಶ್ರಾವಕಿಯರು ಸಹಕರಿಸಿದರು.

ಉಜಿರೆಯ ಮಹಾವೀರ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

 

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here