Saturday 5th, July 2025
canara news

ಅಕ್ರಮ ಪಡಿತರ ಅಕ್ಕಿ ಸಾಗಾಟ ಪತ್ತೆ – ಕಾರ್ಯಾಚರಣೆ ವೇಳೆ ಆರೋಪಿಗಳು ಪರಾರಿ

Published On : 25 Nov 2017   |  Reported By : Canaranews network


ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿರುವ ಘಟನೆ ದ.ಕ.ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.ಬಿ.ಸಿ.ರೋಡಿನಿಂದ ಕೇರಳಕ್ಕೆ ಲಕ್ಷಾಂತರ ರೂ. ಮೌಲ್ಯದ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ ಮಾಡಲು ಮುಂದಾಗುತ್ತಿರುವಾಗ ಬಂಟ್ವಾಳ ಡಿಎಸ್ಪಿ ದಾಳಿ ನಡೆಸಿದ್ದಾರೆ. 2.60 ಲಕ್ಷ ರೂ. ಅಂದಾಜು ಮೌಲ್ಯ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಂದಾಜಿಸಲಾಗಿದೆ. ದಾಳಿಯ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ.

ಬಂಟ್ವಾಳ ಬಿ.ಮೂಡ ಗ್ರಾಮದ ಶಾಂತಿ ಅಂಗಡಿ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ಪಡಿತರ ಅಕ್ಕಿಯನ್ನು ಒಂದು ಲಾರಿಯಿಂದ ಇನ್ನೊಂದು ಲಾರಿ ಮತ್ತು ರಿಕ್ಷಾ ಟೆಂಪೋವೊಂದಕ್ಕೆ ಲೋಡ್ ಮಾಡುತ್ತಿರುವ ವೇಳೆ ಖಚಿತ ಮಾಹಿತಿ ಪಡೆದ ಡಿವೈಎಸ್ಪಿ ಅರುಣ್ ಕುಮಾರ್ ನೇತೃತ್ವ ತಂಡವು ಈ ದಾಳಿ ನಡೆಸಿದೆ.ಕಾರ್ಯಾಚರಣೆಯಲ್ಲಿ ಬಂಟ್ವಾಳ ನಗರ ಠಾಣಾ ಎಸ್ಸೈ ಚಂದ್ರಶೇಖರ್, ಸಿಬ್ಬಂದಿಗಳು ಮತ್ತು ಕಂದಾಯ ಅಧಿಕಾರಿಗಳು ಪಾಲ್ಗೊಂಡಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here