Sunday 28th, April 2024
canara news

ಚಪ್ಪಲಿಯಲ್ಲಿ 24 ಲಕ್ಷ ಮೌಲ್ಯದ ಚಿನ್ನ ಸಾಗಾಟ ಯತ್ನ;ಓರ್ವ ವಶಕ್ಕೆ

Published On : 28 Nov 2017   |  Reported By : canaranews network


ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಚಿನ್ನ ಸಾಗಾಟ ಪತ್ತೆ ಹಚ್ಚಿದ್ದಾರೆ. ದುಬೈಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕನೋರ್ವನ ವರ್ತನೆಯಿಂದ ಕಸ್ಟಮ್ಸ್ ಅಧಿಕಾರಿಗಳು ಸಂಶಯಗೊಂಡು, ತಕ್ಷಣ ಆತನನ್ನು ತನಿಖೆಗೆ ಒಳಪಡಿಸಿದಾಗ ಈ ಅಕ್ರಮ ಚಿನ್ನ ಸಾಗಾಟ ಬಯಲಾಗಿದೆ.ಕಾಸರಗೋಡು ನಿವಾಸಿ ಅಹ್ಮದ್ ತಾಹೀರ್ ದುಬೈಯಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ IX814 ವಿಮಾನ ಮೂಲಕ ಮಂಗಳೂರಿಗೆ ಬಂದಿಳಿದಿದ್ದ .

ತಾಹಿರ್ ವರ್ತನೆ ಬಗ್ಗೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತನಿಖೆಗೆ ಒಳಪಡಿಸಿದ್ದಾರೆ.ಈ ಸಂದರ್ಭದಲ್ಲಿ ತಾಹಿರ್ ಧರಿಸಿದ್ದ ಚಪ್ಪಲ್ ನಲ್ಲಿ ಅಡಗಿಸಿ ಚಿನ್ನ ಸಾಗಾಟ ಪ್ರಕರಣ ಪತ್ತೆಯಾಗಿದೆ. ಚಪ್ಪಲ್ ನ ಸೋಲ್ ನಲ್ಲಿ ತಾಹೀರ್ ಚಿನ್ನದ ಗಟ್ಟಿಗಳನ್ನು ಅಡಗಿಸಿಟ್ಟಿದ್ದ . ಚಪ್ಪಲ್ ನಲ್ಲಿ ಅಡಗಿಸಿ ಇಡಲಾಗಿದ್ದ 804 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಒಟ್ಟು ಮೌಲ್ಯ 24 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಅಹಮ್ಮದ್ ತಾಹಿರ್ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗೆಳು ತನಿಖೆ ಮುಂದುವರೆಸಿದ್ದಾರೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here