ಮಂಗಳೂರು: ದ್ವಿಚಕ್ರ ವಾಹನವೊಂದು ಪಲ್ಟಿಯಾಗಿ ಕೆಳಕ್ಕೆ ಬಿದ್ದ ಪರಿಣಾಮ ರಸ್ತೆಗೆ ಬಿದ್ದಿದ್ದ ಸವಾರನ ಮೇಲೆ ಟಿಪ್ಪರ್ ಚಲಿಸಿ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ದ.ಕ.ಜಿಲ್ಲೆಯ ಸುಳ್ಯದ ಜ್ಯೂನಿಯರ್ ಕಾಲೇಜು ಬಳಿ ನಡೆದಿದೆ.
ಮೃತ ಯುವಕನನ್ನು ಅಲಂಕಲ್ಯ ನಿವಾಸಿ ವೆಂಕಪ್ಪ ಅವರ ಪುತ್ರ ಅವಿನ್ ಎಂದು ಗುರುತಿಸಲಾಗಿದೆ. ತನ್ನ ಆರ್ಟ್ಸ್ ಅಂಗಡಿಯಿಂದ ತೆರಳಿ ಅಲ್ಲಿಂದ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು ಪರಿಣಾಮ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಘಟನೆ ಕುರಿತಂತೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.