ಮಂಗಳೂರು: ಕೇಂದ್ರದ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರ ವೈಫಲ್ಯಗಳ ವಿರುದ್ದ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಡಿ 9 ರಂದು ಪಂಜಿನ ಮೆರವಣಿಗೆ ಆಯೋಜಿಸಲಾಗಿದೆ ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನ 28ರ ಮಂಗಳವಾರ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರದ ದುರಾಡಳಿತದ ವಿರುದ್ದ " ಭಾರತ ನರಳುತ್ತಿದೆ" ಎಂಬ ಜಾಗೃತಿ ಅಭಿಯಾನ ಆರಂಭಿಸಿದ್ದು, ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ ಬೀದಿ ನಾಟಕ ಭಿತ್ತಿಪತ್ರ ಮೂಲಕ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲಾಗುವುದು ಎಂದರು.ಡಿ 9ರಂದು ಲಾಲ್ ಭಾಗ್ ನ ಕರಾವಳಿ ಉತ್ಸವ ಮೈದಾನದಿಂದ ಬಲ್ಮಠ ಮೈದಾನದವರೆಗೆ ಪಂಜಿನ ಮೆರವಣಿಗೆ ನಡೆಸಲಾಗುವುದು. ಇನ್ನು, ಈ ಮೆರವಣಿಗೆಯಲ್ಲಿ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.