Monday 29th, April 2024
canara news

ಕೇಂದ್ರದ ವೈಫಲ್ಯಗಳ ವಿರುದ್ದ " ಭಾರತ ನರಳುತ್ತಿದೆ" ಅಭಿಯಾನ- ಮಿಥುನ್ ರೈ

Published On : 30 Nov 2017   |  Reported By : canaranews network


ಮಂಗಳೂರು: ಕೇಂದ್ರದ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರ ವೈಫಲ್ಯಗಳ ವಿರುದ್ದ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಡಿ 9 ರಂದು ಪಂಜಿನ ಮೆರವಣಿಗೆ ಆಯೋಜಿಸಲಾಗಿದೆ ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನ 28ರ ಮಂಗಳವಾರ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರದ ದುರಾಡಳಿತದ ವಿರುದ್ದ " ಭಾರತ ನರಳುತ್ತಿದೆ" ಎಂಬ ಜಾಗೃತಿ ಅಭಿಯಾನ ಆರಂಭಿಸಿದ್ದು, ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ ಬೀದಿ ನಾಟಕ ಭಿತ್ತಿಪತ್ರ ಮೂಲಕ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲಾಗುವುದು ಎಂದರು.ಡಿ 9ರಂದು ಲಾಲ್ ಭಾಗ್ ನ ಕರಾವಳಿ ಉತ್ಸವ ಮೈದಾನದಿಂದ ಬಲ್ಮಠ ಮೈದಾನದವರೆಗೆ ಪಂಜಿನ ಮೆರವಣಿಗೆ ನಡೆಸಲಾಗುವುದು. ಇನ್ನು, ಈ ಮೆರವಣಿಗೆಯಲ್ಲಿ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here