Saturday 5th, July 2025
canara news

ಪ್ರತಿಷ್ಠಿತ ಇನ್‌ಕ್ಲೂಸಿವ್ ಇಂಡಿಯಾ ಪ್ರಶಸ್ತಿಗೆ ಡಾ.ಡಿ ವೀರೇಂದ್ರ ಹೆಗ್ಗಡೆ ಆಯ್ಕೆ

Published On : 03 Dec 2017   |  Reported By : Canaranews network


ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ,ಡಿ ವೀರೇಂದ್ರ ಹೆಗ್ಗಡೆ ಅವರು ಆ್ಯಕ್ಸೆಸ್ ಇಂಡಿಯಾ ನೀಡುವ ಪ್ರತಿಷ್ಠಿತ ಇನ್‌ಕ್ಲೂಸಿವ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಇನ್‌ಕ್ಲೂಸಿವ್ ಪ್ರಶಸ್ತಿಯನ್ನು ಕಳೆದ 9 ವರುಷಗಳಿಂದ ಸಾಮಾಜಿಕ ಬದ್ಧತೆಯ ಜೊತೆ ವ್ಯವಹಾರ ನಡೆಸುವ ಸಂಸ್ಥೆ ಮತ್ತು ವ್ಯಕ್ತಿಗಳಿಗೆ ನೀಡಲಾಗುತ್ತಿದ್ದು, 1 ಲಕ್ಷ ರೂ. ನಗದು ಬಹುಮಾನ ಮತ್ತು ಟ್ರೋಫಿಯನ್ನು ಒಳಗೊಂಡಿದೆ.

ಮೈಕ್ರೋಫೈನಾನ್ಸ್ ವಲಯದಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಮತ್ತು ವಲಯದ ಅಭಿವೃದ್ಧಿಗೆ ಮಹತ್ವದ ಕಾಣಿಕೆ ನೀಡಿದ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದೀಗ ಈ ಪ್ರತಿಷ್ಠಿತ ಪ್ರಶಸ್ತಿಗೆ ಡಾ,ಡಿ ವೀರೇಂದ್ರ ಹೆಗ್ಗಡೆ ಅವರು ಆಯ್ಕೆಗೊಂಡಿದ್ದಾರೆ.ಡಿ. 11 ರಂದು ದಿಲ್ಲಿಯ ಅಶೋಕ ಹೋಟೆಲ್ ನಲ್ಲಿ ನಡೆಯುವ ಇನ್‌ಕ್ಲೂಸಿವ್ ಫೈನಾನ್ಸ್ ಇಂಡಿಯಾದ ಸಮಾವೇಶದಲ್ಲಿ ಡಾ,ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರೆವೇರಲಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here