Sunday 28th, April 2024
canara news

ಪ್ರತಿಷ್ಠಿತ ಇನ್‌ಕ್ಲೂಸಿವ್ ಇಂಡಿಯಾ ಪ್ರಶಸ್ತಿಗೆ ಡಾ.ಡಿ ವೀರೇಂದ್ರ ಹೆಗ್ಗಡೆ ಆಯ್ಕೆ

Published On : 03 Dec 2017   |  Reported By : Canaranews network


ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ,ಡಿ ವೀರೇಂದ್ರ ಹೆಗ್ಗಡೆ ಅವರು ಆ್ಯಕ್ಸೆಸ್ ಇಂಡಿಯಾ ನೀಡುವ ಪ್ರತಿಷ್ಠಿತ ಇನ್‌ಕ್ಲೂಸಿವ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಇನ್‌ಕ್ಲೂಸಿವ್ ಪ್ರಶಸ್ತಿಯನ್ನು ಕಳೆದ 9 ವರುಷಗಳಿಂದ ಸಾಮಾಜಿಕ ಬದ್ಧತೆಯ ಜೊತೆ ವ್ಯವಹಾರ ನಡೆಸುವ ಸಂಸ್ಥೆ ಮತ್ತು ವ್ಯಕ್ತಿಗಳಿಗೆ ನೀಡಲಾಗುತ್ತಿದ್ದು, 1 ಲಕ್ಷ ರೂ. ನಗದು ಬಹುಮಾನ ಮತ್ತು ಟ್ರೋಫಿಯನ್ನು ಒಳಗೊಂಡಿದೆ.

ಮೈಕ್ರೋಫೈನಾನ್ಸ್ ವಲಯದಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಮತ್ತು ವಲಯದ ಅಭಿವೃದ್ಧಿಗೆ ಮಹತ್ವದ ಕಾಣಿಕೆ ನೀಡಿದ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದೀಗ ಈ ಪ್ರತಿಷ್ಠಿತ ಪ್ರಶಸ್ತಿಗೆ ಡಾ,ಡಿ ವೀರೇಂದ್ರ ಹೆಗ್ಗಡೆ ಅವರು ಆಯ್ಕೆಗೊಂಡಿದ್ದಾರೆ.ಡಿ. 11 ರಂದು ದಿಲ್ಲಿಯ ಅಶೋಕ ಹೋಟೆಲ್ ನಲ್ಲಿ ನಡೆಯುವ ಇನ್‌ಕ್ಲೂಸಿವ್ ಫೈನಾನ್ಸ್ ಇಂಡಿಯಾದ ಸಮಾವೇಶದಲ್ಲಿ ಡಾ,ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರೆವೇರಲಿದೆ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here