ಉಡುಪಿ ಶ್ರೀ ಕೃಷ್ಣ ಮಠದ ಪಂಚಮ ಪರ್ಯಾಯ ಪೀಠಾಧಿಪತಿ ಶ್ರೀ ವಿಶ್ವೇಶತೀರ್ಥ ಸ್ವಾವಿೂಜಿಯವರಿಗೆ ಅವರ ಸನ್ಯಾಸದ 80ನೇ ವರ್ಧಂತಿ ಪ್ರಯುಕ್ತ ಶ್ರೀ ಕೃಷ್ಣ ಮಠದ ಚಂದ್ರ ಶಾಲೆಯಲ್ಲಿ ಮಂಗಳೂರು ಕಲ್ಕೂರ ಪ್ರತಿಷ್ಠಾನದ ವತಿಯಿಂದ ನಾಣ್ಯಗಳಿಂದ ತುಲಾಭಾರ ನಡೆಸಲಾಯಿತು.
ಪೇಜಾವರ ಮಠದ ಕಿರಿಯ ಸ್ವಾವಿೂಜಿ ವಿಶ್ವಪ್ರಸನ್ನ ತೀರ್ಥರ ದಿವ್ಯಉಪಸ್ಥಿತಿಯಲ್ಲಿ ಮಠದ ದೀವಾನರಾದ ರಘುರಾಮ ಆಚಾರ್ಯರ ಮಾರ್ಗದರ್ಶನದಲ್ಲಿ ಚಿತ್ರಾಪುರ ಗೋಪಾಲಕೃಷ್ಣ ಆಚಾರ್ಯರು ಧಾರ್ಮಿಕ ವಿಧಿ ವಿಧಾನಗಳನ್ನು ನೇರವೇರಿಸಿದರು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ನೇತೃತ್ವದಲ್ಲಿ ತುಲಾಭಾರ ನಡೆಯಿತು.
ಕೇಂದ್ರ ಕೌಶಾಲಾಭಿವೃಧಿ ಸಚಿವ ಅನಂತ ಕುಮಾರ ಹೆಗಡೆ, ಲೋಕಾಯುಕ್ತ ಪಿ. ವಿಶ್ವನಾಥ ಶೆಟ್ಟಿ, ಸಚಿವ ಪ್ರಮೋದ್ ಮಧ್ವರಾಜ್, ಕಟೀಲು ದೇವಳದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ಉಡುಪಿ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಪರ್ಕಳ ಮಂಜುನಾಥ ಉಪಾಧ್ಯಾಯ, ಶಿವಳ್ಳಿ ಬ್ರಾಹ್ಮಣ ಸಂಘದ ಅಧ್ಯಕ್ಷ ಅರವಿಂದ ಆಚಾರ್ಯ, ನಾಗಪಾತ್ರಿ ಸಗ್ರಿ ಗೋಪಾಲಕೃಷ್ಣ ಸಾಮಗ, ಶ್ರೀಪತಿ ಭಟ್ ಮೂಡಬಿದ್ರೆ ಪ್ರಶಾಂತ್ ಶೇಟ್ ಮಂಗಳೂರು ಮೊದಲಾದವರು ಉಪಸ್ಥಿತರಿದ್ದರು