ಮುಂಬಯಿ, ಡಿ.04: ಶಿರ್ವ ಸಮೀಪದ ಕುತ್ಯಾರು ಶ್ರೀಪರಶುರಾಮೇಶ್ವರ ಕ್ಷೇತ್ರದ ಸೂರ್ಯಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ನ ವಾರ್ಷಿಕೋತ್ಸವ ಸಮಾರಂಭದಲ್ಲಿ ಹಿರಿಯ ಪತ್ರಕರ್ತ, ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯ, ನಿವೃತ್ತ ಶಿಕ್ಷಕ ಬಿ.ಪುಂಡಲೀಕ ಮರಾಠೆ ಅವರಿಗೆ ವಿವಿಧಕ್ಷೇತ್ರಗಳಲ್ಲಿ ಸಲ್ಲಿಸಿ ಗಣನೀಯ ಸಾಧನೆಗಾಗಿ ಪತ್ನಿ ಉಷಾ ಮರಾಠೆ ಅವರನ್ನೊಳಗೊಂಡು `ಪರಶು ಪುರಸ್ಕಾರ' ನೀಡಿ ಸನ್ಮಾನಿಸಲಾಯಿತು.
ಶ್ರೀಕ್ಷೇತ್ರದ ಧರ್ಮದರ್ಶಿ ಹಾಗೂ ಶಿಕ್ಷಣ ಸಂಸ್ಥೆಯ ಸಂಚಾಲಕ ಶ್ರೀಶಂಭುದಾಸ್ ಗುರೂಜಿ, ಶಾರದಾ ಶಂಭುದಾಸ್, ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯೆ ರೇಶ್ಮಾಉದಯ್ ಶೆಟ್ಟಿ, ಉಪನ್ಯಾಸಕ ಅನಂತ ಮೂಡಿತ್ತಾಯ, ಪಲಿಮಾರು ಗ್ರಾಮ ಪಂಚಾಯತ್ ಸದಸ್ಯೆ ಗಾಯತ್ರಿ ದಿನೇಶ್ ಪ್ರಭು, ದಿನೇಶ್ ಪ್ರಭು, ಶಾಲಾ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಭಟ್ ಮತ್ತಿತರರು ಉಪಸ್ಥಿತರಿದ್ದರು.