Friday 29th, March 2024
canara news

ಮಂಗಳೂರಿನಲ್ಲಿ ಕೆಪಿಜೆಪಿ ಪಕ್ಷದ ಪ್ರಚಾರಕ್ಕಿಳಿದ ಉಪೇಂದ್ರ

Published On : 06 Dec 2017   |  Reported By : canaranews network   |  Pic On: Photo credit : The Hindu


ಮಂಗಳೂರು: "ರಾಜ್ಯದಲ್ಲಿ ಜನರ ಮಧ್ಯೆ ಕೆಲಸ ಮಾಡುವ 224 ಜನ ಸಿಎಂ ನನಗೆ ಬೇಕಿದ್ದಾರೆ. ಅವರು ತಮ್ಮ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳಂತೆ ಜನರ ಸಮಸ್ಯೆಗಳನ್ನು ಪರಿಹರಿಸಬೇಕು" ಎಂದು ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷ (ಕೆಪಿಜೆಪಿ) ಸಂಸ್ಥಾಪಕ- ನಟ ಉಪೇಂದ್ರ ತಿಳಿಸಿದರು.ಕೆಪಿಜೆಪಿಯ ಪ್ರಚಾರದ ಸಲುವಾಗಿ ಮಂಗಳೂರಿಗೆ ಭೇಟಿ ನೀಡಿದ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈಗಿರುವ ರಾಜಕೀಯ ವ್ಯವಸ್ಥೆಯ ವ್ಯತಿರಿಕ್ತವಾಗಿ ಕೆಪಿಜೆಪಿಯನ್ನು ಆರಂಭಿಸಿದ್ದೇವೆ ಎಂದು ತಿಳಿಸಿದರು.

ಒಬ್ಬ ಕಾರ್ಮಿಕನಾಗಿ ಜನರ ಮುಂದೆ ಹೋಗುತ್ತಿದ್ದೇನೆ. ನನ್ನ ಯೋಚನೆಗಳನ್ನು ಮುಂದಿಟ್ಟು ಅವರೊಂದಿಗೆ ಮಾತನಾಡುತ್ತಿದ್ದೇನೆ. ಸಮಾಜದಲ್ಲಿನ ಪ್ರಜ್ಞಾವಂತರು ಪಕ್ಷಕ್ಕೆ ಬನ್ನಿ ಎಂದು ಅವರು ಕರೆ ನೀಡಿದರು.ಎಲ್ಲಿ ಸತ್ಯ ಇರುತ್ತದೋ ಅಲ್ಲಿ ಧರ್ಮ ಇರುತ್ತದೆ. ಸತ್ಯ ಇದ್ದಲ್ಲಿ ಧರ್ಮದ ಅಗತ್ಯ ಇರುವುದಿಲ್ಲ. ಅನ್ಯಾಯವನ್ನು ಪ್ರತಿಭಟಿಸುವ ಮನಸ್ಥಿತಿ ನಮ್ಮಲ್ಲಿ ಇಲ್ಲದಂತಾಗಿದೆ. ಶಿಕ್ಷಣ, ವೈದ್ಯಕೀಯ ವ್ಯವಸ್ಥೆ ಉಚಿತವಾಗಿ ಸಿಕ್ಕಿದರೆ ಯಾರೂ ಭೃಷ್ಟಾಚಾರಿಗಳು ಆಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.ಈ ದೇಶದಲ್ಲಿ ಶೇ 80ರಷ್ಟು ಒಳ್ಳೆಯವರಿದ್ದಾರೆ. ಆ 80ರಷ್ಟು ಜನರ ಪ್ರತಿನಿಧಿಯಾಗಿ ನಾನು ಬಂದಿದ್ದೇನೆ ಎಂದು ಹೇಳಿದರು.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here