ಮಂಗಳೂರು: ಬಸ್ ಹಾಗೂ ಟ್ರ್ಯಾಕ್ಟರ್ ನಡುವಿನ ಅಪಘಾತದಲ್ಲಿ ಅದೃಷ್ಟವಶಾತ್ ಟ್ರ್ಯಾಕ್ಟರ್ ಚಾಲಕ ಪ್ರಾಣಪಾಯದಿಂದ ಪಾರಾದ ಘಟನೆ ಮಂಗಳೂರು ಹೊರವಲಯದ ಬೊಂದೆಲ್ ಚರ್ಚ್ ಮುಂಭಾಗ ರ ಗುರುವಾರ ಬೆಳಿಗ್ಗೆ ನಡೆದಿದೆ.
ಪದವಿನಂಗಡಿಯಿಂದ ಬಂದ ಟ್ರ್ಯಾಕ್ಟರ್ ಪಚ್ಚನಾಡಿ ಕಡೆಗೆ ಹೋಗಲು ತಿರುವು ತೆಗೆದುಕೊಳ್ಳುತಿದ್ದಂತೆ ಬೊಂದೇಲಿನಿಂದ ಸ್ಟೇಟ್ ಬ್ಯಾಂಕಿಗೆ ತೆರಳುವ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು ಚಾಲಕ ಶಿವಾನಂದ(30) ಸಣ್ಣಪುಟ್ಟ ಗಾಯಾಗಳೊಂದಿಗೆ ಪಾರಾಗಿದ್ದಾರೆ.
ಗಾಯಗೊಂಡ ಶಿವಾನಂದ ಅವರನ್ನು ಖಾಸಗಿ ಆಸ್ಪತ್ರೆಗೆ ಖಲಿಸಲಾಗಿದೆ.ಅಪಘಾತದಿಂದಾಗಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು ,ಕದ್ರಿ ಟ್ರಾಫಿಕ್ ಪೋಲಿಸರು ಸ್ಥಳಕ್ಕಾಗಮಿಸಿ ಅಪಘಾತಕ್ಕೊಳಗಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.